ದೇವಾಲಯಕ್ಕೆ ಬರುವ ಭಕ್ತರು ಚೌಡೇಶ್ವರಿ ದೇವಿಯ ಬಳಿ ತಮ್ಮ ಪ್ರಶ್ನೆ, ಸಮಸ್ಯೆಗಳಿಗೆ ಪರಿಹಾರ ಕೇಳುತ್ತಾರೆ, ಈ ವೇಳೆ ಗ್ರಾಮದ ಇಬ್ಬರು ಅನಕ್ಷರಸ್ಥರು ದೇವಿಯ ವಿಗ್ರಹವನ್ನು ಹಿಡಿದು ಮನಸೊ ಇಚ್ಛೆ ಬರೆಯುತ್ತಾರೆ. ನಂತರ ದೇವಸ್ಥಾನದ ಹಿರಿಯ ಅರ್ಚಕರು ಅಕ್ಕಿ ಹಿಟ್ಟಿನಲ್ಲಿ ಸುಲಲಿತವಾಗಿ ಕನ್ನಡದಲ್ಲಿ ಪರಿಹಾರವನ್ನು ಬರೆಯುತ್ತಾರೆ. ಕೇಳುಗರು ಯಾವುದೇ ಭಾಷೆಯಲ್ಲಿ ಬೇಕಾದರೂ ಸಮಸ್ಯೆಗಳನ್ನ, ಪ್ರಶ್ನೆಗಳನ್ನ ಮನದಲ್ಲಿ ನಿವೇದಿಸಿಕೊಳ್ಳಬಹುದು.