ಈ ವರ್ಷ ಆ.14 ರಂದು ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದ್ದು, ಶ್ರಾವಣ ಮಾಸದ ಕೃಷ್ಣ ಪಕ್ಷದ 8 ನೆಯ ದಿನದ ಮಧ್ಯರಾತ್ರಿ ಶ್ರೀ ಕೃಷ್ಣ ಜನಿಸಿದ್ದರ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ಮಧ್ಯರಾತ್ರಿಯೂ ಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯುತ್ತದೆ. ಈ ದಿನದಂದು ಕೃಷ್ಣನ ಸಾಹಸಗಳನ್ನು ವರ್ಣಿಸುವ ಭಜನೆಗಳು ನಡೆಯಲಿರುವುದು ವಿಶೇಷವಾಗಿದೆ. ಸಾಮಾನ್ಯ ಆಚರಣೆಯಂತೆ ಬಾಲಕೃಷ್ಣನಿಗೆ ಕ್ಷೀರಾಭಿಷೇಕ ನೆರವೇರಿಸಿ ವಸ್ತ್ರಗಳನ್ನುಡಿಸಿ, ಉಪವಾಸವಿರುವ ಆಚರಣೆಯೂ ನಡೆಯಲಿದೆ. ಆದರೆ ಕೃಷ್ಣ ಜನ್ಮಿಸಿದ ನಾಡು ಮಥುರಾದಲ್ಲಿ ಭೋಗ್ ಎಂಬ ಆಚರಣೆ ನಡೆಯಲಿದೆ.