ಈ ಕ್ಷೇತ್ರ ಅಷ್ಟ ತೀರ್ಥಗಳಿಂದಲೂ, ಅಷ್ಟ ಪರ್ವತಗಳಿಂದಲೂ, ಪವಿತ್ರ ಪುಣ್ಯನದಿ ಹಾಗೂ ಗಿರಿಕಾನನಗಳಿಂದ ಕೂಡಿದ ಕ್ಷೇತ್ರವಾಗಿದೆ. ಮಾಂಡವ್ಯ, ಕಣ್ವ, ವಶಿಷ್ಠ, ಪುರಂಜಯ, ಪ್ರಹ್ಲಾದ ಮುಂತಾದವರ ತಪೋ ಕ್ಷೇತ್ರವಾಗಿದ್ದು, ತಿರುಪತಿ ಶ್ರೀನಿವಾಸನ ಆಜ್ನೆಯಂತೆ ಮಾಂಡವ್ಯ ಋಷಿಗಳು ತಿರುಮಲೆಯ ಸ್ವರ್ಣಾದ್ರಿ ಕ್ಷೇತ್ರದಲ್ಲಿ ಕುಟೀರವನ್ನು ಕಟ್ಟಿಕೊಂಡು ತಪಸ್ಸು ಮಾಡಿದರು. ಆಗ ಒಂದು ದಿನ ಸ್ವಪ್ನದಲ್ಲಿ ಶ್ರೀನಿವಾಸ ದೇವರು ಕಾಣಿಸಿಕೊಂಡು ಉದ್ಭವ ಸಾಲಿಗ್ರಾಮ ರೂಪದಲ್ಲಿರುವ ನನ್ನನ್ನು ನಿತ್ಯವೂ ಆರಾಧಿಸಿದರೆ ಇಷ್ಟಾರ್ಥ ಸಿದ್ಧಿಯಾಗಿ ಮೋಕ್ಷ ಲಭಿಸುತ್ತದೆ ಎಂದು ಹೇಳಿದನಂತೆ ಅದಂರೆಯೇ ಮಾಂಡವ್ಯ ಋಷಿಗಳು ಉದ್ಭವ ಸಾಲಿಗ್ರಾಮವನ್ನು ನಂತರ ಅಲ್ಲಿ ವೇಂಕಟೇಶ್ವರ ಸ್ವಾಮಿಯ ವಿಗ್ರಹವನ್ನು