ಏಕಾದಶಿ ಹಾಗೂ ರವಿವಾರಗಳಂದು ತುಳಸಿ ಎಲೆಗಳನ್ನು ಕೀಳಬಾರದು ಎಂಬ ನಂಬಿಕೆ ಇದೆ. ಆದ್ದರಿಂದ ಆ ದಿನಗಳಲ್ಲಿ ತುಳಸಿಯ ಎಲೆಗಳನ್ನು ಕೀಳಬಾರದು ಎಂಬ ಅಂಶಗಳು ಗಮನದಲ್ಲಿರುವುದು ಉತ್ತಮ. ಒಣಗಿದ ತುಳಸಿ ಗಿಡಗಳನ್ನು ಇಟ್ಟುಕೊಳ್ಳುವುದು, ಸಾಮಾನ್ಯಗಿಡಗಳಂತೆ ಎಸೆಯುವುದು ಸೂಕ್ತವಲ್ಲ. ಅದನ್ನು ನೀರಿನಲ್ಲಿ ವಿಸರ್ಜಿಸುವುದು ಸೂಕ್ತ, ಅವಕಾಶ ಇದ್ದರೆ ನದಿಯಲ್ಲಿ ವಿಸರ್ಜಿಸಿದರೆ ಉತ್ತಮ ಎಂಬ ನಂಬಿಕೆ ಇದೆ. ಒಣಗಿದ ತುಳಸಿ ಗಿಡವನ್ನು ವಿಸರ್ಜಿಸಿದ ನಂತರ ತಕ್ಷಣವೇ ಹೊಸ ಗಿಡವನ್ನು ನೆಡಬೇಕು. ತುಳಸಿ ಗಿಡದ ನಡುವೆ ಮುಳ್ಳಿನ ಗಿಡಗಳನ್ನು ಬೆಳೆಸುವುದನ್ನು ನಿಲ್ಲಿಸಿ, ಅದರ ಬದಲು ತುಳಸಿ ಗಿಡದ ನಡುವೆ ಹೂವಿನ ಗಿಡಗಳನ್ನು ಬೆಳೆಸಬಹುದು.