ಮೈಸೂರು ಸಾಂಸ್ಕೃತಿಕ ನಗರಿ, ನಮ್ಮ ಸಂಸ್ಕೃತಿ, ಧಾರ್ಮಿಕತೆಯನ್ನು ಮತ್ತಷ್ಟು ಶ್ರೀಮಂತಗೊಳಿಸಿರುವ ಸಾಂಸ್ಕೃತಿಕ ರಾಜಧಾನಿ. ಹಲವು ಶ್ರೀಕ್ಷೇತ್ರಗಳಿರುವ ಪ್ರದೇಶವೂ ಹೌದು. ಮೈಸೂರು ಎಂದೊಡನೆ ಮಹಿಷಾಸುರನನ್ನು ಸಂಹಾರ ಮಾಡಿದ ಚಾಮುಂಡೇಶ್ವರಿ ದೇವಿಯ ನೆನಪಾಗುತ್ತದೆ. ಹಾಗೆಯೇ ಮೈಸೂರಿನಿಂದ ಕೆಲವೇ ಕಿಮೀ ದೂರದಲ್ಲಿರುವ ಶ್ರೀರಂಗಪಟ್ಟಣ ಎಂದೊಡನೆ ನಿಮಿಷಾಂಬ ದೇವಿಯ ನೆನಪಾಗುತ್ತದೆ. ನಿಮಿಷಾಂಬ ದೇವಿ ಕಾವೇರಿ ನದಿ ದಡದಲ್ಲಿರುವ ಪ್ರಸಿದ್ಧ ದೇವಾಲಯ.