ಹೌದು, ಆನೆಯ ದಂತದಿಂದ ನಿರ್ಮಾಣವಾಗಿರುವ ಸಿಂಹಾಸನ ನಮ್ಮ ಕರ್ನಾಟಕದಲ್ಲಿದೆ. ಜಗತ್ತಿನ ಏಕೈಕ ಹಸ್ತಿ ದಂತ ಸಿಂಹಾಸನ ಇರುವುದು ರಾಮಚಂದ್ರಾಪುರ ಮಠದಲ್ಲಿ. 1930-40ರ ದಶಕದಲ್ಲಿ ಹಸ್ತಿದಂತ ಸಿಂಹಾಸನವನ್ನು ನಿರ್ಮಿಸಲಾಗಿತ್ತು. ರಾಮಚಂದ್ರಾಪುರ ಮಠದ ಅಂದಿನ ಶ್ರೀಗಳಾಗಿದ್ದ ಶ್ರೀ ರಾಮಚಂದ್ರಭಾರತೀ ಸ್ವಾಮಿಗಳು ಸಾಕಿದ ಆನೆಯ ಮರಣಾನಂತರ ಅದರ ದಂತದಿಂದ ಈ ಸಿಂಹಾಸನವನ್ನು ನಿರ್ಮಿಸಲಾಗಿದೆ. ಮಹಾತ್ಮ ಗಾಂಧಿ ಸಹ ಈ ಸಿಂಹಾಸನದ ದರ್ಶನ ಪಡೆದಿದ್ದರೆಂಬುದು ವಿಶೇಷ.