ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ, ಸಿಎಂ ಆಗಿ ಮೂರನೇ ಬಾರಿ ಹಾಗೂ ವಿತ್ತ ಸಚಿವರಾಗಿ ದಾಖಲೆಯ 10ನೇ ಬಜೆಟ್ ಮಂಡಿಸಿದರು.
ಇಂದು ಮಧ್ಯಾಹ್ನ 12.30ರಿಂದ ಸತತ ಮೂರು ಗಂಟೆಗಳ ಕಾಲ 2015-16ನೇ ಸಾಲಿನ ಆಯವ್ಯಯವನ್ನು ಮಂಡಿಸಿ ಸಿಎಂ, ಸಾಮಾಜಿಕ ನ್ಯಾಯ, ಜಾತ್ಯಾತೀತ ನಂಬಿಕೆ ಮತ್ತು ಕೋಮು ಸೌಹಾರ್ದತೆ ತತ್ವಗಳಲ್ಲಿ ಬದ್ಧವಾಗಿರುವ ನಮ್ಮ ಸರ್ಕಾರದ ನಡೆ-ನುಡಿಗಳಲ್ಲಿ ಹಾಗೂ ಆದ್ಯತೆಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದರು.
ಕೋಮು ಸೌಹಾರ್ದತೆಗೆ ಹೆಚ್ಚಿನ ಒತ್ತು ನೀಡಿ, ರಾಜ್ಯವನ್ನು ಪ್ರಗತಿ ಪಥದಲ್ಲಿ ಮುನ್ನಡೆಸುವುದಾಗಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.
ಇದು ನಮ್ಮ ಸರ್ಕಾರ ಮಂಡಿಸುತ್ತಿರುವ 3ನೇ ಬಜೆಟ್ ಆಗಿದ್ದು, ಈ ಹಿಂದೆ ಮಂಡಿಸಿದ ಬಜೆಟ್ನ ಯೋಜನೆಗಳು ಫಲ ನೀಡಿದ್ದು, ಅದರ ಆಧಾರದ ಮೇಲೆ ಈ ಆಯವ್ಯಯ ಪತ್ರದಲ್ಲಿ ಯೋಜನೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸುವುದಾಗಿ ಹೇಳಿದರು.
ತಂಬಾಕು ಬಳಕೆಯನ್ನು ನಿಯಂತ್ರಣಕ್ಕೆ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ ಬೀಡಿ, ಸಿಗರೇಟು, ಗುಟ್ಕಾ ಮತ್ತಿತರ ಉತ್ಪನ್ನಗಳ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಶೇ.17 ರಿಂದ ಶೇ.20 ಕ್ಕೆ ಹೆಚ್ಚಳ ಮಾಡಿದೆ. ಇನ್ನು ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ತೆರಿಗೆ ದರ(ಸೆಸ್)ವನ್ನು ಶೇ.1 ರಷ್ಟು ಹೆಚ್ಚಿಸಲಾಗಿದೆ.
ಗ್ರಾಮೀಣಾಭಿವೃದ್ಧಿಗೆ 9,827 ಕೋಟಿ, ಕ್ರೀಡಾ ಇಲಾಖೆಗೆ 147 ಕೋಟಿ ರೂಪಾಯಿ, ಸಮಾಜಕಲ್ಯಾಣ ಇಲಾಖೆಗೆ 4584 ಕೋಟಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಗೆ 16,204 ಕೋಟಿ ರೂಪಾಯಿ, ಕಾರ್ಮಿಕ ಮತ್ತು ಉದ್ಯೋಗ ಇಲಾಖೆಗೆ 852 ಕೋಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ 332 ಕೋಟಿ ರೂಪಾಯಿ ಘೋಷಿಸಿದ್ದಾರೆ.
ಬಜೆಟ್ ಮುಖ್ಯಾಂಶಗಳು:
Advertisement