ಕೇಂದ್ರ ಬಜೆಟ್ ನಿರಾಶಾದಾಯಕ: ಸಿಎಂ ಸಿದ್ದರಾಮಯ್ಯ

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ ಬಜೆಟ್ ನಿರಾಶಾದಾಯಕ ಬಜೆಟ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ ಬಜೆಟ್ ನಿರಾಶಾದಾಯಕ ಬಜೆಟ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮತಾನಾಡಿದ ಅವರು, ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ ನಿರಾಶಾದಾಯಕವಾಗಿದೆ. ಇದು ರೈತ ಸ್ನೇಹಿ ಬಜೆಟ್ ಅಂತೂ ಅಲ್ಲವೇ ಅಲ್ಲ ಎಂದು ತಿಳಿಸಿದ್ದಾರೆ. 
ಉದ್ಯೋಗ ಖಾತರಿ ಯೋಜನೆಗೆ 4500 ಕೋಟಿ ಮಾತ್ರ ಹೆಚ್ಚಳ ಮಾಡಲಾಗಿದೆ. ಆದರೆ, ಉದ್ಯೋಗ ಖಾತರಿಗಾಗಿ ಕೇಂದ್ರ ಸರ್ಕಾರ ಹೆಚ್ಚು ಹಣ ನೀಡಬಹುದಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಇನ್ನು ರಾಜ್ಯ ಸರ್ಕಾರ ಜಾರಿ ಮಾಡಿದ್ದ ಕೃಷಿ ಉತ್ಪನ್ನಗಳ ಖರೀದಿಗೆ ಆನ್ ಲೈನ್ ಮಾರುಕಟ್ಟೆ ಪದ್ಧತಿಯ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪಿಸಿದ್ದು, ದೇಶಾದ್ಯಂತ ಯೋಜನೆ ಜಾರಿ ಮಾಡುವುದಾಗಿ ಅರುಣ್ ಜೇಟ್ಲಿ ಹೇಳಿದ್ದಾರೆ. ಇದನ್ನು ನಾವು ಸ್ವಾಗತಿಸುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com