ಓರ್ವ ವ್ಯಕ್ತಿಯಿಂದ 2 ಸಾವಿರಕ್ಕೂ ಹೆಚ್ಚು ದೇಣಿಗೆ ಪಡೆಯುವುದಿದ್ದರೆ ಚೆಕ್, ಡಿಜಿಟಲ್ ಪಾವತಿ ಮೂಲಕ ದೇಣಿಗೆ ಪಡೆಯಲು ಅವಕಾಶ ನೀಡಲಾಗಿದೆ. ಆದರೆ ದೇಣಿಗೆ ನೀಡುವವರ ಬಗ್ಗೆ ಮಾಹಿತಿ ನೀಡುವುದು ಕಡ್ಡಾಯಗೊಳಿಸಲಾಗಿದೆ ಎಂದು ಜೇಟ್ಲಿ ತಿಳಿಸಿದ್ದಾರೆ. ಅರುಣ್ ಜೇಟ್ಲಿ ಅವರ ಘೋಷಣೆಯಿಂದ ಎಗ್ಗಿಲ್ಲದೇ ದೇಣಿಗೆ ರಾಜಕೀಯ ಪಕ್ಷಗಳಿಗೆ ಹೊಡೆತ ಬಿದ್ದಿದ್ದು, ದೇಣಿಗೆ ಪಾವತಿಯಲ್ಲಿ ಪಾರದರ್ಶಕತೆ ತರಲು ಮಹತ್ವದ ನಡೆಯಾಗಿದೆ.