ನವದೆಹಲಿ: ಫೆ.1 ರಂದು 2017-18 ನೇ ಸಾಲಿನ ಬಜೆಟ್ ಮಂಡಿಸಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ, ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ಹೇಳಿದ್ದು, ರೈತರ ಆದಾಯ ಭದ್ರತೆ ಘೋಷಿಸಿದ್ದಾರೆ. ರೈತರಿಗೆ ಸಾಲ ನೀಡುವುದಕ್ಕಾಗಿ 10 ಲಕ್ಷ ಕೋಟಿ ರೂಪಾಯಿಯನ್ನು ನೀಡಲಾಗಿದ್ದು, ಕೃಷಿಕ ಉತ್ಪನ್ನಗಳ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ವಿತ್ತ ಸಚಿವರು ಹೇಳಿದ್ದಾರೆ.