ಅಲ್ಲದೆ 20 ಪಾರಂಪರಿಕ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಚಿಂತನೆ ಮಾಡಲಾಗಿದ್ದು, 'ದೆಹಲಿ ಹಾಟ್' ಮಾದರಿಯಂತೆ 'ಮೈಸೂರು ಹಾಟ್' ಅಭಿವೃದ್ಧಿಗೆ ಪ್ರಸ್ತಾಪಿಸಲಾಗಿದೆ. ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರ ನಿಖರ ಮಾಹಿತಿಗಾಗಿ ಮಾಹಿತಿ ಸಮೀಕ್ಷೆಗೆ ಕ್ರಮ ಕೈಗೊಳ್ಳಲಾಗಿದ್ದು, ಕರಾವಳಿಯ ಪ್ರವಾಸಿ ಸ್ಥಳಗಳಲ್ಲಿ 'ಹೌಸ್ ಬೋಟ್' ಸೇವೆ ಆರಂಭಿಸಲಾಗುತ್ತದೆ. ಅಂತೆಯೇ ಡಾ. ರಾಜ್ಕುಮಾರ್ ಸಮಾಧಿ ಸ್ಥಳದಲ್ಲಿ ಸುಸಜ್ಜಿತ ಯೋಗ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ.