ವೃದ್ಧಾಪ್ಯ ಯೋಜನೆ, ನಿರ್ಗತಿಕ ವಿಧವಾ ವೇತನ ಪಿಂಚಣಿಯಲ್ಲಿ ಹೆಚ್ಚಳ ಮಾಡಲಾಗುತ್ತದೆ. ಶಿವಮೊಗ್ಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸಾ ಸೌಲಭ್ಯ, ಆರೋಗ್ಯ ವಲಯಗಳ ನೀತಿ, ಕಾರ್ಯಕ್ರಮಗಳ ಶಿಫಾರಸ್ಸು ನೀಡಲು ರಾಜ್ಯ ಆರೋಗ್ಯ ಪರಿಷತ್ತು ಸ್ಥಾಪನೆ, ರಾಜ್ಯದ ಎಲ್ಲಾ ಜನತೆಗೆ ಆರೋಗ್ಯ ಕರ್ನಾಟಕ ಯೋಜನೆ, ವರ್ಷದ ಅಂತ್ಯದೊಳಗೆ ಯೋಜನೆ ಜಾರಿ ಮಾಡಲಾಗುತ್ತದೆ. ಗದಗ, ಕೊಪ್ಪಳ ಹಾಗೂ ಚಾಮರಾಜನಗರದ ವೈದ್ಯಕೀಯ ಕಾಲೇಜುಗಳಲ್ಲಿ ರೂ.100 ಕೋಟಿ ವೆಚ್ಚಗಳಲ್ಲಿ ಆಸ್ಪತ್ರೆಗಳ ಕಟ್ಟಡ ನಿರ್ಮಾಣ, ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಕ್ರಮ, ಹಾಸನ, ಮೈಸೂರು, ಕಾರವಾರದಲ್ಲಿ ಕ್ಯಾನ್ಸರ ಚಿಕಿತ್ಸಾ ಘಟಕ ಸ್ಥಾಪನೆ, ಗುಲ್ಬರ್ಗಾ ವೈದ್ಯಕೀಯ ಕಾಲೇಜಿನಲ್ಲಿ ಸುಟ್ಟಗಾಯಗಳ ವಾರ್ಡ್ ಆರಂಭ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.