ಪ್ರತ್ಯೇಕ ನಾಡಧ್ವಜ ಕುರಿತ ವಿನ್ಯಾಸ ಹಾಗೂ ಬಣ್ಣಗಳ ಕುರಿತ ವರದಿಯನ್ನು ಈಗಾಗಲೇ ಸಮಿತಿ ಸರ್ಕಾರಕ್ಕೆ ಸಲ್ಲಿಸಿದೆ. ಸಮಿತಿ ವಿನ್ಯಾಸಗೊಳಿಸಿರುವ ನಾಡಧ್ವಜವು ಹಳದಿ, ಬಿಳಿ ಹಾಗೂ ಕೆಂಪುಗಳನ್ನೊಳಗೊಂಡಿದ್ದು, ಬಿಳಿ ಬಣ್ಣದ ಮಧ್ಯದಲ್ಲಿ ಕರ್ನಾಟಕ ಸರ್ಕಾರದ ಲಾಂಛನ ಮುದ್ರೆ ಗಂಡಬೇರುಂಡ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಾಗಲೇ ವರದಿಯನ್ನು ಹಾಗೂ ಅಧಿಕಾರಿಗಳ ಅಭಿಪ್ರಾಯಗಳನ್ನು ಸಲ್ಲಿಸಿದ್ದೇವೆ. ಇನ್ನು ಮುಂದಿನ ನಿರ್ಧಾರ ತೆಗೆದುಕೊಳ್ಳುವುದು ಅವರಿಗೆ ಬಿಟ್ಟ ವಿಚಾರ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.