ರಾಜ್ಯ ಬಜೆಟ್: ಸಿಎಂ ಕುಮಾರಸ್ವಾಮಿ ಅಂಟ್ವಾಳ ಕಾಯಿ ಬೇಸಾಯಕ್ಕೆ ಉತ್ತೇಜನ ನೀಡಿದ್ದೇಕೆ? ಇಲ್ಲಿದೆ ವಿವರ

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಮ್ಮ ಮೊದಲ ಬಜೆಟ್ ನಲ್ಲಿ ಅಂಟ್ವಾಳ ಕಾಯಿ ಬೇಸಾಯವನ್ನು ಉತ್ತೇಜಿಸಲು 10 ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ.
Natural Soap Nuts
Natural Soap Nuts
Updated on
ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಮ್ಮ ಮೊದಲ ಬಜೆಟ್ ನಲ್ಲಿ ಅಂಟ್ವಾಳ ಕಾಯಿ ಬೇಸಾಯವನ್ನು ಉತ್ತೇಜಿಸಲು 10 ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ. 
ಅಂಟ್ವಾಳ ಕಾಯಿ ಬೇಸಾಯವನ್ನು ಡಿಟರ್ಜೆಂಟ್ ಹಾಗೂ ಸೋಪ್ ಗಳಿಗೆ ಪರ್ಯಾಯವಾಗಿ ಬಳಕೆ ಮಾಡುವ ಉದ್ದೇಶದಿಂದ ಉತ್ತೇಜಿಸಲು ಸರ್ಕಾರ ಮುಂದಾಗಿದೆ. ಬಜೆಟ್ ಭಾಷಣದಲ್ಲಿ ಬೆಳ್ಳಂದೂರು ಕೆರೆಯ ಪರಿಸ್ಥಿತಿಯನ್ನು ಉದಾಹರಣೆ ನೀಡಿರುವ ಹೆಚ್ ಡಿ ಕುಮಾರಸ್ವಾಮಿ ಡಿಟರ್ಜೆಂಟ್ ಹಾಗೂ ಸೋಪ್ ಗಳಿಂದಾಗಿ ಪರಿಸರಕ್ಕೆ ಹಾನಿ ಯುಂಟಾಗುತ್ತಿದೆ. ಮಲಿನಗೊಂಡ ನೀರನ್ನು ಕೆರೆಗಳಿಗೆ ಬಿಡಲಾಗುತ್ತಿದೆ.  ಡಿಟರ್ಜೆಂಟ್, ಸೋಪ್ ಗಳಿಂದ ಮಲಿನಗೊಂಡ ನೀರು ಕೆರೆ ಸೇರುತ್ತಿರುವುದರಿಂದ ಕೆರೆಗಳಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿವೆ. ಆದರೆ ವಿದೇಶಗಳಲ್ಲಿ ಡಿಟರ್ಜೆಂಟ್ ಗಳಿಗೆ ಪರ್ಯಾಯವಾಗಿ ನೈಸರ್ಗಿಕವಾಗಿ ಲಭ್ಯವಿರುವ ಅಂಟ್ವಾಳ ಕಾಯಿಯನ್ನು ಬಳಕೆ ಮಾಡಲಾಗುತ್ತಿದ್ದು, ಕರ್ನಾಟಕದಲ್ಲೂ ಇದೇ ಮಾದರಿಯನ್ನು ಅಳವಡಿಸಿಕೊಳ್ಳಲು ಅಂಟ್ವಾಳ ಕಾಯಿ ಬೆಳೆಯುವುದಕ್ಕೆ ಉತ್ತೇಜನ ನೀಡಲು 10 ಕೋಟಿ ಮೀಸಲಿರಿಸಲಾಗುವುದು ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com