ಅಂಟ್ವಾಳ ಕಾಯಿ ಬೇಸಾಯವನ್ನು ಡಿಟರ್ಜೆಂಟ್ ಹಾಗೂ ಸೋಪ್ ಗಳಿಗೆ ಪರ್ಯಾಯವಾಗಿ ಬಳಕೆ ಮಾಡುವ ಉದ್ದೇಶದಿಂದ ಉತ್ತೇಜಿಸಲು ಸರ್ಕಾರ ಮುಂದಾಗಿದೆ. ಬಜೆಟ್ ಭಾಷಣದಲ್ಲಿ ಬೆಳ್ಳಂದೂರು ಕೆರೆಯ ಪರಿಸ್ಥಿತಿಯನ್ನು ಉದಾಹರಣೆ ನೀಡಿರುವ ಹೆಚ್ ಡಿ ಕುಮಾರಸ್ವಾಮಿ ಡಿಟರ್ಜೆಂಟ್ ಹಾಗೂ ಸೋಪ್ ಗಳಿಂದಾಗಿ ಪರಿಸರಕ್ಕೆ ಹಾನಿ ಯುಂಟಾಗುತ್ತಿದೆ. ಮಲಿನಗೊಂಡ ನೀರನ್ನು ಕೆರೆಗಳಿಗೆ ಬಿಡಲಾಗುತ್ತಿದೆ. ಡಿಟರ್ಜೆಂಟ್, ಸೋಪ್ ಗಳಿಂದ ಮಲಿನಗೊಂಡ ನೀರು ಕೆರೆ ಸೇರುತ್ತಿರುವುದರಿಂದ ಕೆರೆಗಳಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿವೆ. ಆದರೆ ವಿದೇಶಗಳಲ್ಲಿ ಡಿಟರ್ಜೆಂಟ್ ಗಳಿಗೆ ಪರ್ಯಾಯವಾಗಿ ನೈಸರ್ಗಿಕವಾಗಿ ಲಭ್ಯವಿರುವ ಅಂಟ್ವಾಳ ಕಾಯಿಯನ್ನು ಬಳಕೆ ಮಾಡಲಾಗುತ್ತಿದ್ದು, ಕರ್ನಾಟಕದಲ್ಲೂ ಇದೇ ಮಾದರಿಯನ್ನು ಅಳವಡಿಸಿಕೊಳ್ಳಲು ಅಂಟ್ವಾಳ ಕಾಯಿ ಬೆಳೆಯುವುದಕ್ಕೆ ಉತ್ತೇಜನ ನೀಡಲು 10 ಕೋಟಿ ಮೀಸಲಿರಿಸಲಾಗುವುದು ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.