ಈ ಬಗ್ಗೆ ಮಾತನಾಡಿರುವ ಎಫ್ ಕೆಸಿಸಿಐ ಅಧ್ಯಕ್ಷ ಕೆ ಸುಧಾಕರ್ ಶೆಟ್ಟಿ ಅವರು, ರೈತರ ಸಾಲ ಮನ್ನ ವಿಚಾರವಾಗಿ ರಾಜ್ಯ ಸರ್ಕಾರ ಎಷ್ಟು ಗಂಭೀರವಾಗಿದೆ ಎಂಬುದು ತಿಳಿದಿಲ್ಲ. ಆದರೆ ಕಾರ್ಮಿಕ ಸಂಘಟನೆಗಳು ಮುಂದಿಟ್ಟಿರುವ ಬೇಡಿಕೆಗಳನ್ನು ಸಿಎಂ ಕುಮಾರಸ್ವಾಮಿ ಈಡೇರಿಸಬೇಕಿದೆ. ಸರ್ಕಾರದ ನಿಲುವು ನಮ್ಮ ಪರವಾಗಿರಲಿದೆ ಎಂಬ ವಿಶ್ವಾಸ ನಮಗಿದೆ ಎಂದು ಹೇಳಿದ್ದಾರೆ.