ವಿಶ್ವಬ್ಯಾಂಕ್ ನೆರವಿನೊಂದಿಗೆ 70ರ ದಶಕದಲ್ಲಿ ರೇಷ್ಮೆ ಕೃಷಿಗೆ ಪೂರಕವಾಗಲೆಂದು ಬೆಂಗಳೂರು ಸಮೀಪದ ತಲಘಟ್ಟಪುರದಲ್ಲಿ ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತ ಅಭಿವೃದ್ಧಿ ಸಂಸ್ಥೆಯನ್ನು ಸ್ಥಾಪಿಸಲಾಗಿತ್ತು. ಈ ಸಂಸ್ಥೆಯ ಪೂರ್ಣ ಪ್ರಮಾಣದ ಅನುಕೂಲ ಪಡೆಯಲು ತಜ್ಞರಿಂದ ಸಂಪೂರ್ಣ ಅಧ್ಯಯನ ನಡೆಸಿ ವರದಿ ಪಡೆದು ಈ ಸಂಸ್ಥೆಯ ಪುನಶ್ಚೇತನ ಮಾಡುವ ಉದ್ದೇಶಕ್ಕಾಗಿ 5 ಕೋಟಿ ರೂ.ಗಳನ್ನು ನೀಡಲಾಗುವುದು.