ಬಜೆಟ್ ಮಂಡನೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರ ಸ್ವಾಮಿ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದರು. ಪಕ್ಕದ ರಾಜ್ಯಗಳಿಗೆ ಹೋಲಿಸಿದರೇ ನಮ್ಮ ಕರ್ನಾಟಕದಲ್ಲಿ ತೆರಿಗೆ, ಇಂಧನದರಗಳು ಕಡಿಮೆ ಇದೆ, ಕೇಂದ್ರ ಸರ್ಕಾರ ಇಂಧನ ದರವನ್ನು ಶೇ.230 ರಷ್ಟು ಏರಿಸುತ್ತಿದೆ, ಹೀಗಿರುವಾಗ ನನ್ನ ಬಜೆಟ್ ನಲ್ಲಿ ಇಂಧನ ದರ ಏರಿಕೆಯನ್ನು ಪ್ರಶ್ನಿಸುವ ನೈತಿಕತೆ ಬಿಜೆಪಿಗಿಲ್ಲ ಎಂದು ಕಿಡಿ ಕಾರಿದರು.