ದೆಹಲಿಯ ಸಂಸತ್ ಭವನದಲ್ಲಿ ಮಾತನಾಡಿದ ಅರುಣ್ ಜೇಟ್ಲಿ, ಕೇಂದ್ರ ಸರ್ಕಾರ ಆರೋಗ್ಯ ಕ್ಷೇತ್ರವನ್ನು ಜನರ ಮನೆಗೆ ತೆಗೆದುಕೊಂಡು ಹೋಗಬಯಸುತ್ತದೆ. ಭಾರತ ಆರೋಗ್ಯಕರವಾಗಿದ್ದರೆ ಮಾತ್ರ ಆರ್ಥಿಕ ಸ್ಥಿತಿಯೂ ಆರೋಗ್ಯಕರವಾಗಿರುತ್ತದೆ. ಹೀಗಾಗಿ ಕೇಂದ್ರ ಸರ್ಕಾರ ವಿಶೇಷ ಯೋಜನೆಗಳನ್ನು ಘೋಷಣೆ ಮಾಡುತ್ತಿದೆ ಎಂದು ಹೇಳಿದರು. ಪ್ರಮುಖವಾಗಿ ಬಡವರಿಗೆ ಉಚಿತ ಔಷಧಿ ದೊರಕಿಸಲು 12,000 ಕೋಟಿ ರುಪಾಯಿ ನಿಗದಿಪಡಿಸಲಾಗಿದ್ದು, ಬಡವರಿಗೆ ಉಚಿತ ಡಯಾಲಿಸಿಸ್ ಗಾಗಿ ಯೋಜನೆ ರೂಪಿಸಲಾಗಿದೆ. ಇದಲ್ಲದೆ ಸ್ಟಂಟ್ ಗಳ ದರ ಇಳಿಕೆ ಮಾಡಲಾಗಿದ್ದು, ಎಲ್ಲ ರೀತಿಯ ವೈದ್ಯಕೀಯ ಸೇವೆಗಳೂ ಆನ್ ಲೈನ್ ನಲ್ಲಿ ಲಭ್ಯವಿದೆ. ಇದಲ್ಲದೆ ನ್ಯಾಷನಲ್ ಹೆಲ್ತ್ ಪಾಲಿಸಿ ಮೂಲಕ ಅತ್ಯುತ್ತಮ ಆರೋಗ್ಯ ಸೇವೆ ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆಗೆ 30 ಸಾವಿರ ಕೋಟಿ ಮೀಸಲಿರಿಸಲಾಗಿದ್ದು, ರಾಷ್ಟ್ರೀಯ ಹೆಲ್ತ್ ಪಾಲಿಸಿ ಮೂಲಕ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ಯೋಜನೆ ರೂಪಿಸಲಾಗಿದೆ.