ಕೇಂದ್ರ ಬಜೆಟ್ ಯಾವುದೇ ದುರದೃಷ್ಟಿ, ಗೊತ್ತು ಗುರಿ ಇಲ್ಲದ ಬಜೆಟ್: ಸಿಎಂ ಸಿದ್ದರಾಮಯ್ಯ

ಕೇಂದ್ರ ಬಜೆಟ್ ಯಾವುದೇ ದುರದೃಷ್ಟಿ ಇಲ್ಲದ ಮತ್ತು ಗೊತ್ತು ಗುರಿ ಇಲ್ಲದ ಬಜೆಟ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ....
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on
ಬೆಂಗಳೂರು: ಕೇಂದ್ರ ಬಜೆಟ್ ಯಾವುದೇ ದುರದೃಷ್ಟಿ ಇಲ್ಲದ ಮತ್ತು ಗೊತ್ತು ಗುರಿ ಇಲ್ಲದ ಬಜೆಟ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಂಡಿಸಿದ 2018ನೇ ಸಾಲಿನ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ರೈತರ ಸಾಲ ಮನ್ನಾ ಸೇರಿದಂತೆ ಕೇಂದ್ರ ಬಜೆಟ್ ಬಗ್ಗೆ ನಾವು ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದೇವು. ಆದರೆ ಅರುಣ್ ಜೇಟ್ಲಿ ರಾಜ್ಯದ ಜನತೆ ನಿರಾಶೆ ಮಾಡಿದ್ದಾರೆ ಎಂದರು.
ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ. ಇದು ಅಭಿವೃದ್ಧಿ ಆಧಾರಿತ ಬಜೆಟ್ ಅಲ್ಲ. ಅವರು ಆರೋಗ್ಯ ವಿಮೆ ಯೋಜನೆ ಸೇರಿದಂತೆ ಹಲವು ದೊಡ್ಡ ದೊಡ್ಡ ಘೋಷಣೆಗಳನ್ನು ಮಾಡಿದ್ದಾರೆ. ಆದರೆ ಅದಕ್ಕೆ ಯಾವುದೇ ಹಣ ಹಂಚಿಕೆ ಮಾಡಿಲ್ಲ. ಇದೇ ರೀತಿ ಕಳೆದ ವರ್ಷ ಘೋಷಿಸಿದ ಯೋಜನೆ ಇನ್ನೂ ಜಾರಿಯಾಗಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಬಜೆಟ್ ರಾಜ್ಯದ ಜನತೆಗೆ ತೀವ್ರ ನಿರಾಶೆ ಮೂಡಿಸಿದೆ. ರಾಜ್ಯಕ್ಕೆ ವಿಶೇಷವಾದ ಯಾವುದೇ ಯೋಜನೆ ಘೋಷಿಸಿಲ್ಲ. ಅವರು ಕೇವಲ ಮಾತನಾಡುತ್ತಾರೆ. ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದೇವೆ ಎನ್ನುತ್ತಿದ್ದಾರೆ. ಆದರೆ ಕನಿಷ್ಠ ಬೆಂಬಲ ಬೆಲೆಗಾಗಿ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com