ಕರ್ನಾಟಕ ಬಜೆಟ್ 2019: 5 ಕೋಟಿ ರೂ. ವೆಚ್ಚದಲ್ಲಿ ಮಂಗನ ಕಾಯಿಲೆ ಸಂಶೋಧನಾ ಮತ್ತು ಚಿಕಿತ್ಸಾ ಘಟಕ ಸ್ಥಾಪನೆ

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು 2019-20ನೇ ಸಾಲಿನ ಬಜೆಟ್ ನಲ್ಲಿ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಕ್ಕೂ ಒತ್ತು ನೀಡಿದ್ದು, ಕಳೆದ 3 ತಿಂಗಳಿನಿಂದ ಜನರನ್ನು ಕಾಡಿರುವ ಮಂಗನ ಕಾಯಿಲೆಯ ಸಂಶೋಧನಾ ಮತ್ತು ಚಿಕಿತ್ಸಾ ಘಟಕಕ್ಕೆ 5 ಕೋಟಿ ರೂ. ಘೋಷಿಸಿದ್ದಾರೆ.
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ
Updated on
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು 2019-20ನೇ ಸಾಲಿನ ಬಜೆಟ್ ನಲ್ಲಿ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಕ್ಕೂ ಒತ್ತು ನೀಡಿದ್ದು, ಕಳೆದ 3 ತಿಂಗಳಿನಿಂದ ಜನರನ್ನು ಕಾಡಿರುವ ಮಂಗನ ಕಾಯಿಲೆಯ ಸಂಶೋಧನಾ ಮತ್ತು ಚಿಕಿತ್ಸಾ ಘಟಕಕ್ಕೆ 5 ಕೋಟಿ ರೂ. ಘೋಷಿಸಿದ್ದಾರೆ.
ಶಿವಮೊಗ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಮಂಗನ ಕಾಯಿಲೆಯ ಸಂಶೋಧನಾ ಮತ್ತು ಚಿಕಿತ್ಸಾ ಘಟಕ ಆರಂಭವಾಗಲಿದೆ.  ಕಳೆದ ನವೆಂಬರ್ ನಿಂದ ಫೆಬ್ರವರಿಯ ವರೆಗೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ, ಹೊಸನಗರ ತಾಲೂಕಿನ ಕೆಲ ಅರಣ್ಯ ಭಾಗಗಳಲ್ಲಿ ಈ ಕಾಯಿಲೆ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತದೆ. 
ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ ಮಂಗನ ಕಾಯಿಲೆ ದೃಢಪಡಿಸುವ ಪ್ರಯೋಗಾಲಯವಿದ್ದು, ಸಂಶೋಧನಾ ಮತ್ತು ಚಿಕಿತ್ಸಾ ಘಟಕ ಸ್ಥಾಪನೆಯಿಂದ ಮತ್ತಷ್ಟು ಅನುಕೂಲವಾಗಲಿದೆ.
 ಅಪೌಷ್ಟಿಕತೆ ನಿವಾರಣೆಗೆ 1 ಕೋಟಿ ರೂ.
 ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸೂಕ್ತ ಆರೈಕೆಗಾಗಿ 49 ತಾಲ್ಲೂಕು ಆಸ್ಪತ್ರೆಗಳಲ್ಲಿ ಪೌಷ್ಟಿಕ ಪುನಶ್ಚೇತನ ಕೇಂದ್ರಗಳ ಸ್ಥಾಪನೆಗೆ 1 ಕೋಟಿ ರೂ. ಅನುದಾನ ಘೋಷಿಸಲಾಗಿದೆ. ಬಿಪಿಎಲ್‌ ಕಾರ್ಡ್‌ ದಾರರಾದ ಗರ್ಭಿಣಿಯರಿಗೆ 6 ತಿಂಗಳ ಮಾಸಿಕ ಸಹಾಯ ಧನ 1000 ರೂ ಗಳಿಂದ ರೂ 2000ಕ್ಕೆ ಏರಿಕೆ, ಪೌಷ್ಠಿಕ ಪುನಶ್ಚೇತನ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com