'ಹಲವಾರು ಯೋಜನೆಗಳನ್ನು ಮೈತ್ರಿ ಪಕ್ಷ ನೀಡಿದ ಹೆಗ್ಗಳಿಕೆ ಇದೆ. ನಮ್ಮ ಸರ್ಕಾರ ಬಂದು 256 ದಿನಗಳಾಗಿವೆ. ಸರ್ಕಾರದ ಸಾಧನೆ ಅಳೆಯಲು ಇದು ಸೂಕ್ತ ಸಮಯ. ಸಾಮಾಜಿಕ ಭದ್ರತೆ, ಉದ್ಯೋಗ ಸೃಷ್ಟಿ ನಮ್ಮ ಆದ್ಯತೆ ಎಂದು ಹೇಳಿದರು. ಈ ನಡುವೆ ಮತ್ತೆ ಬಿಜೆಪಿ ಸದಸ್ಯರು ಕುಮಾರಸ್ವಾಮಿ ಬಜೆಟ್ ಮಂಡನೆಗೆ ವಿರೋಧ ಪಕ್ಷದಿಂದ ತೀವ್ರ ಅಡ್ಡಿ ಪಡಿಸಿದರು. ಅಲ್ಲದೆ ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ತಮ್ಮ ವಿರೋಧಕ್ಕೆ ಇಲ್ಲಿ ಬೆಲೆ ಇಲ್ಲ. ಹೀಗಾಗಿ ಪ್ರತಿಭಟನಾರ್ಥವಾಗಿ ತಾವು ಸಭಾ ತ್ಯಾಗ ಮಾಡುತ್ತಿರುವುದಾಗಿ ಹೇಳಿ ಸದನದಿಂದ ಹೊರ ನಡೆದರು.