ರಾಜ್ಯದ ಮಹಾನಗರ ಪಾಲಿಕೆಗಳ ಅಭಿವೃದ್ಧಿಗೆ 1, 525 ಕೋಟಿ ರೂ. ವೆಚ್ಚದಲ್ಲಿ 'ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ' ಪ್ರಕಟಿಸಲಾಗಿದೆ. ರಾಮನಗರ, ಚಿಕ್ಕಬಳ್ಳಾಪುರ, ಬಾಗಲಕೋಟೆ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಂದ ಒಟ್ಟಾರೆ ಹೊಸ ತಾಲೂಕುಗಳನ್ನು ಘೋಷಣೆ ಮಾಡಲಾಗಿದೆ. ಅದರ ಪ್ರಕಾರ, ಹಾರೋಹಳ್ಳಿ, ಚೇಳೂರು, ತೇರದಾಳ ಹಾಗೂ ಕಳಸ ಹೊಸ ತಾಲೂಕುಗಳಾಗಿ ಮಾರ್ಪಡಲಿವೆ. ಕಲಬುರಗಿ, ವಿಜಯಪುರ, ದಕ್ಷಿಣ ಕನ್ನಡ, ಮೈಸೂರು, ಗದಗ, ದಾವಣಗೆರೆ, ಧಾರವಾಡ, ಕೊಡಗು ಜಿಲ್ಲೆಗಳಲ್ಲಿ ಡ್ರೋನ್ ಮೂಲಕ ಮರು ಸಮೀಕ್ಷೆ ಕಾರ್ಯ ಕೈಗೊಳ್ಳಲಾಗುವುದು. ಪ್ರಸಕ್ತ ಸಾಲಿನಲ್ಲಿ ರಾಜ್ಯದ ವಿವಿಧ ಮಠಗಳು, ಧಾರ್ಮಿಕ ಸಂಸ್ಥೆಗಳಿಗೆ 60 ಕೋಟಿ ರೂ. ನಿಗದಿ ಮಾಡಲಾಗಿದೆ.