ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೆಬೆನ್ನೂರಿನ ವೀರಭದ್ರೇಶ್ವರ ಚಾರಿಟಬಲ್ ಟ್ರಸ್ಟ್ ಗೆ 1 ಕೋಟಿ, ಕರ್ನಾಟಕ ಜಾನಪದ ಪರಿಷತ್ತಿನ ಕಾರ್ಯಚಟುವಟಿಕೆಗಳ ಕಾರ್ಯನಿರ್ವಹಣೆಗೆ 1 ಕೋಟಿ ರೂ., ಮಂಡ್ಯದ ಕರ್ನಾಟಕ ಸಂಘದ ಅಭಿವೃದ್ಧಿಗೆ 1 ಕೋಟಿ ರೂ., ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರದ ಆದಿಶಕ್ತಿ ಮಾತೆಯರ ವೃದ್ಧಾಶ್ರಮ ಅಭಿವೃದ್ಧಿಗೆ 2 ಕೋಟಿ ರೂ. ಕರಗ ಉತ್ಸವ ಆಚರಿಸುವ 139 ಸಂಘ, ಸಂಸ್ಥೆಗಳಿಗೆ 2 ಕೋಟಿ ರೂ. ನಿಗದಿಪಡಿಸಲಾಗಿದೆ.