ಬೆಂಗಳೂರು: ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಇಂದು ಮಂಡಿಸಿರುವ 2019-20 ನೇ ಸಾಲಿನ ರಾಜ್ಯ ಮುಂಗಡ ಪತ್ರದಲ್ಲಿ ರಾಜ್ಯದಲ್ಲಿ ನಾಲ್ಕು ಹೊಸ ತಾಲೂಕುಗಳನ್ನು ಘೋಷಿಸಲಾಗಿದೆ.
ರಾಮನಗರ ಜಿಲ್ಲೆಯ ಹಾರೋಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು, ಬಾಗಲಕೋಟೆ ಜಿಲ್ಲೆಯ ತೇರದಾಳ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಳಸ ನಗರಗಳನ್ನು ಹೊಸ ತಾಲೂಕುಗಳಾಗಿ ಘೋಷಿಸಲಾಗಿದೆ. ಇವುಗಳನ್ನು ತಾಲೂಕುಗಳಾಗಿ ಘೋಷಿಸಬೇಕೆಂಬುದು ಹಲವು ದಿನಗಳ ಬೇಡಿಕೆಯಾಗಿತ್ತು.
ಈ ಬಾರಿಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಇವುಗಳನ್ನು ಹೊಸ ತಾಲೂಕುಗಳನ್ನು ಘೋಷಿಸಲಾಗಿದ್ದು, ಅಲ್ಲಿನ ಸ್ಥಳೀಯರ ಬಹುದಿನ ಬೇಡಿಕೆ ಈಡೇರಿದಂತಾಗಿದೆ.
Advertisement