ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳ ಆಧುನೀಕರಣಕ್ಕೆ ಕ್ರಮ, 1,500 ನೂತನ ಶಾಲಾ ಕೊಠಡಿ ನಿರ್ಮಾಣ, 5000 ಶಾಲಾ ಕೊಠಡಿಗಳ ಉನ್ನತೀಕರಣ, ಒಂದು ಸಾವಿರ ಶಾಲೆಗಳಿಗೆ ಕಲಿಕಾ ಉಪಕರಣ ವಿತರಣೆ, ಶಾಲಾ ಕಟ್ಟಡಗಳ ನಿರ್ವಹಣೆಗೆ ಎಸ್ಟೇಟ್ ಅಧಿಕಾರಿ ನೇಮಕ, ‘ಗುರುಚೇತನ’ ಕಾರ್ಯಕ್ರಮದಡಿ 1 ಲಕ್ಷ ಶಿಕ್ಷಕರಿಗೆ 10 ದಿನಗಳ ತರಬೇತಿ, ಕಲಿಕೆಯ ಫಲಿತಾಂಶ ಸುಧಾರಣೆಗೆ ಆದ್ಯತೆ, ಟೀಚರ್- ಮೆಂಟರ್ ಕಾರ್ಯಕ್ರಮದ ಮುಖಾಂತರ ಶಿಕ್ಷಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳ ಜೊತೆಗೆ, ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ಎಚ್ಚರವಹಿಸಲು ಅವರ ಮೇಲೆ ವೈಯಕ್ತಿಕ ಗಮನ ಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ.