ಹಾಲಿ ಮೈತ್ರಿ ಸರ್ಕಾರದ 2ನೇ ಬಜೆಟ್ ಮಂಡಿಸುತ್ತಿರುವ ಸಿಎಂ ಎಚ್ ಡಿ ಕುಮಾರಸ್ವಾಮಿಯವರು ಜನರ ನಿರೀಕ್ಷೆಗೂ ಮೀರಿ ಬಜೆಟ್ ವೇಳೆ ಜನಪ್ರಿಯ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ. ಬಜೆಟ್ ನಲ್ಲಿ ಶಿಕ್ಷಣ, ಕೃಷಿ, ಆರೋಗ್ಯ, ಗ್ರಾಮೀಣಾಭಿವೃದ್ದಿ, ನೀರಾವರಿ ಕ್ಷೇತ್ರಗಳಿಗೆ ಮೊದಲ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ರಾಜ್ಯ ಹಣಕಾಸು ಖಾತೆ ಮತ್ತು ಸಿಎಂ ಆಗಿರುವ ಕುಮಾರಸ್ವಾಮಿ ಅವರೇ ಇಂದು ಸದನದಲ್ಲಿ ಬಜೆಟ್ ಮಂಡಿಸಲಿದ್ದಾರೆ. ಸಮ್ಮಿಶ್ರ ಸರ್ಕಾರದ 2ನೇ ಬಜೆಟ್ ಇದಾಗಿದ್ದು, ಈ ಬಾರಿ ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ.