ಕೇಂದ್ರ ಬಜೆಟ್ 2019 ಮಂಡನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇಂದು ಸಂಸತ್ ಭವನದ ಆವರಣದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಇದು ಎಲ್ಲರಿಗೂ ತಿಳಿದಿರುವ ಸತ್ಯವೇ ಆಗಿದೆ. ಲೋಕಸಭಾ ಚುನಾವಣೆಗೆ ಕೆಲವೇ ದಿನಗಳಷ್ಟೇ ಬಾಕಿ ಇದ್ದು, ಈ ಹಂತದಲ್ಲಿ ಮೋದಿ ಸರ್ಕಾರ ಬಜೆಟ್ ಮೂಲಕ ಮತದಾರರನ್ನು ಓಲೈಸುವ ಕಾರ್ಯಕ್ಕೆ ಖಂಡಿತಾ ಮುಂದಾಗುತ್ತದೆ. ಇದೇ ಕಾರಣಕ್ಕೆ ಮೋದಿ ಸರ್ಕಾರ ಜನಪ್ರಿಯ ಘೋಷಣೆಗಳನ್ನು ಮಾಡಿ ಮತದಾರರನ್ನು ತನ್ನತ್ತ ಸೆಳೆಯುವ ಪ್ರಯತ್ನ ಮಾಡಲಿದೆ.