26 ಸಂಸದರಿದ್ದರೂ ರಾಜ್ಯಕ್ಕೆ ದೊಡ್ಡ ನಷ್ಟ: ಪ್ರಿಯಾಂಕ ಖರ್ಗೆ

ರಾಜ್ಯದಲ್ಲಿ 26 ಬಿಜೆಪಿ ಸಂಸದರಿದ್ದರೂ ಕರ್ನಾಟಕಕ್ಕೆ ಅತಿದೊಡ್ಡ ನಷ್ಟವಾದಂತೆ ಕಾಣಿಸುತ್ತಿದೆ ಎಂದು ...
ಸಚಿವ ಪ್ರಿಯಾಂಕ್ ಖರ್ಗೆ
ಸಚಿವ ಪ್ರಿಯಾಂಕ್ ಖರ್ಗೆ
Updated on
ಕಲಬುರಗಿ: ರಾಜ್ಯದಲ್ಲಿ 26 ಬಿಜೆಪಿ ಸಂಸದರಿದ್ದರೂ ಕರ್ನಾಟಕಕ್ಕೆ ಅತಿದೊಡ್ಡ ನಷ್ಟವಾದಂತೆ ಕಾಣಿಸುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಿದ್ದಾರೆ.
ಕೇಂದ್ರದ ಬಜೆಟ್ ಕುರಿತು ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಈ ಬಾರಿಯ ಕೇಂದ್ರ ಬಜೆಟ್ ರಾಜ್ಯಕ್ಕೆ ನಿರಾಶೆ ಮೂಡಿಸಿದೆ. ಸರ್ಕಾರಕ್ಕೆ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ. ಆದರೆ ತೆರಿಗೆಗೆ ಪ್ರತಿಯಾಗಿ ರಾಜ್ಯಕ್ಕೆ ಕೇಂದ್ರ ಬಜೆಟ್ ನಲ್ಲಿ ಏನ್ನನೂ ನೀಡಿಲ್ಲ. ರಾಜ್ಯದಿಂದ ಆಯ್ಕೆಯಾಗಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಭಾರೀ ನಿರೀಕ್ಷೆ ಇತ್ತು. 26 ಬಿಜೆಪಿ ಸಂಸದರಿದ್ದರೂ ಬಜೆಟ್‍ನಲ್ಲಿ ರಾಜ್ಯವು ಸೋತಂತೆ ಆಗಿದೆ ಎಂದು ನಿರಾಸೆ ಪ್ರಕಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com