ನವದೆಹಲಿ: ಹಂಗಾಮಿ ಹಣಕಾಸು ಸಚಿವ ಪಿಯೂಷ್ ಗೋಯೆಲ್ ಇಂದು ಮಂಡಿಸಿರುವ 2019-20 ನೇ ಸಾಲಿನ ಮಧ್ಯಂತರ ಕೇಂದ್ರ ಬಜೆಟ್ ನಲ್ಲಿ ರೈತರಿಗೆ ದಿನವೊಂದಕ್ಕೆ 17 ರೂ. ನೀಡುವುದಾಗಿ ಘೋಷಣೆ ಮಾಡುವ ಮೂಲಕ ಅವರ ಶ್ರಮ, ಬದ್ಧತೆ ಎಲ್ಲವನ್ನೂ ಅವಮಾನ ಮಾಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ರೈತರಿಗೆ ಪ್ರತಿವರ್ಷ 6 ಸಾವಿರ ರೂ. ನೇರ ನಗದು ವರ್ಗಾವಣೆ ಘೋಷಣೆ ಕುರಿತಂತೆ ಟ್ವೀಟರ್ ಮೂಲಕ ಟೀಕಿಸಿರುವ ರಾಹುಲ್ ಗಾಂಧಿ, ಕಳೆದ ಐದು ವರ್ಷಗಳಿಂದ ರೈತರ ಜೀವನವನ್ನು ಸರ್ಕಾರ ಹಾಳು ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ನೇರ ನಗದು ವರ್ಗಾವಣೆ ಮೂಲಕ ಪ್ರತಿವರ್ಷ ರೈತರ ಖಾತೆಗಳಿಗೆ 6 ಸಾವಿರ ರೂ. ನೀಡುವುದಾಗಿ ಪಿಯೂಷ್ ಗೋಯೆಲ್ ಘೋಷಿಸಿದ್ದು, ಈ ಯೋಜನೆ ಪ್ರಕಾರ ಕೇಂದ್ರ ಸರ್ಕಾರ ಮೂರು ಕಂತಿನಲ್ಲಿ ಪ್ರತಿ ದಿನ 16.44 ರೂ. ಹಣವನ್ನು ನೀಡಲಿದೆ.
Advertisement