ಸಣ್ಣ ಹಿಡುವಳಿದಾರರಿಗಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯಲ್ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ. ಇದಿಷ್ಟೇ ಅಲ್ಲದೇ ಪಶುಸಂಗೋಪನೆ, ಮೀನುಗಾರಿಕೆ ಕ್ಷೇತ್ರಕ್ಕೆ ಭರಪೂರ ಯೋಜನೆಗಳನ್ನು ಘೋಷಿಸಲಾಗಿದ್ದು, ಗೋವುಗಳ ರಕ್ಷಣೆಗೆ ರಾಷ್ಟ್ರೀಯ ಕಮಾಧೇನು ಯೋಜನೆ ಘೋಷಣೆ ಮಾಡಲಾಗಿದೆ. ಕೃಷಿ ಕ್ಷೇತ್ರಕ್ಕೆ ಮೋದಿ ಬಜೆಟ್ ನಲ್ಲಿ ಘೋಷಣೆಯಾದ ಅನುದಾನ, ಯೋಜನೆಗಳ ವಿವರ ಹೀಗಿದೆ.