ನವದೆಹಲಿ: 2024ಕ್ಕೆ ಗ್ರಾಮದ ಎಲ್ಲಾ ಮನೆಗಳಿಗೆ ಜಲ ಜೀವನ ಯೋಜನೆಯಡಿ ನೀರು ಒದಗಿಸಲು ಜಲ ಶಕ್ತಿ ಸಚಿವಾಲಯ ಮೂಲಕ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳ ಜೊತೆ ಕೆಲಸ ಮಾಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಭಾರತದಲ್ಲಿ ಪ್ರಸ್ತುತ ಇರುವ ನೀರಿನ ಕೊರತೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಭಾರತೀಯರಿಗೆ ಸುರಕ್ಷಿತ ಕುಡಿಯುವ ನೀರು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಜಲಶಕ್ತಿ ಸಚಿವಾಲಯ ರಚನೆ ಪ್ರಮುಖ ಹೆಜ್ಜೆಯಾಗಿದೆ ಎಂದು ಸೀತಾರಾಮನ್ ಹೇಳಿದರು.
ನೀರಿನ ಸಂಪನ್ಮೂಲ ನಿರ್ವಹಣೆ ಮತ್ತು ಆಂತರಿಕ ಮತ್ತು ಹಂತಹಂತ ಮಾದರಿಯಲ್ಲಿ ನೀರಿನ ಪೂರೈಕೆ ಮಾಡಲು ಹೊಸ ಸಚಿವಾಲಯ ಕೆಲಸ ಮಾಡಲಿದ್ದು ಎಲ್ಲಾ ರಾಜ್ಯ ಸರ್ಕಾರಗಳ ಜೊತೆಗೆ ಪ್ರತಿ ಮನೆಗೆ ನೀರು ಒದಗಿಸಿ 2024ರ ಹೊತ್ತಿಗೆ ಗ್ರಾಮೀಣ ಪ್ರದೇಶದ ಎಲ್ಲಾ ಮನೆಗಳಿಗೆ ನೀರು ಒದಗಿಸುವ ಭರವಸೆ ನೀಡುತ್ತಿದ್ದೇವೆ ಎಂದರು.