ಬೆಂಗಳೂರು: ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ನಾಯಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2020-21ನೇ ಸಾಲಿನ ಪರಿಷ್ಕೃತ ಬಜೆಟ್ ಮಂಡನೆ ಆರಂಭಿಸಿದ್ದಾರೆ.
ಇದು ಯಡಿಯೂರಪ್ಪ ಅವರ 7ನೇ ಬಜೆಟ್ ಆಗಿದ್ದು, ಈ ಹಿಂದೆ 2006ರಲ್ಲಿ ಜೆಡಿಎಸ್ ಮತ್ತು ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಡಿಸಿಎಂ ಆಗಿದ್ದ ವೇಳೆ 2 ಬಾರಿ, ನಂತರ ಅಸ್ತಿತ್ವಕ್ಕೆ ಬಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ 4 ಬಾರಿ ಬಜೆಟ್ ಮಂಡಿಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಟ್ಟು 9 ಬಾರಿ ಬಜೆಟ್ ಮಂಡಿಸಿದ ದಾಖಲೆ ಇದೆ.
ಈ ಬಾರಿಯ ಬಜೆಟ್ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿದ್ದು, ಕೃಷಿ, ಬಂಡವಾಳ ಹೂಡಿಕೆ, ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
Advertisement