ಯಡಿಯೂರಪ್ಪ (ಸಂಗ್ರಹ ಚಿತ್ರ)
ಯಡಿಯೂರಪ್ಪ (ಸಂಗ್ರಹ ಚಿತ್ರ)

ಆಯವ್ಯಯ ಮಂಡನೆಗೂ ಮುನ್ನ ಸಿಎಂ ಟೆಂಪಲ್ ರನ್: ದೇವಾಲಯದಲ್ಲಿ ಬಜೆಟ್ ಪ್ರತಿಗೆ ಪೂಜೆ

2020-21ನೇ ಸಾಲಿನ ಬಜೆಟ್‌ ಮಂಡನೆಗೂ ಮುನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಬೆಳಗ್ಗೆ ಮಲ್ಲೇಶ್ವರಂನಲ್ಲಿರುವ ಗಣಪತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
Published on

ಬೆಂಗಳೂರು: 2020-21ನೇ ಸಾಲಿನ ಬಜೆಟ್‌ ಮಂಡನೆಗೂ ಮುನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಬೆಳಗ್ಗೆ ಮಲ್ಲೇಶ್ವರಂನಲ್ಲಿರುವ ಗಣಪತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಬಜೆಟ್‌ ಪ್ರತಿ ಇರುವ ಸೂಟ್‌ಕೇಸ್‌ನೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ವಿಘ್ನ ನಿವಾರಕನಿಗೆ ಪೂಜೆ ಸಲ್ಲಿಸಿದರು.

ಈ ವೇಳೆ ಸೂಟ್‌ಕೇಸನ್ನು ಅರ್ಚಕರಿಗೆ ನೀಡಿ ಪೂಜೆ ಸಲ್ಲಿಸುವಂತೆ ಕೋರಿದರು. ಅದರಂತೆ ಅರ್ಚಕರು ಕೆಲವು ನಿಮಿಷಗಳ ಕಾಲ ಸೂಟ್‌ಕೇಸ್‌ ಅನ್ನು ದೇವರ ಪ್ರತಿಮೆಯ ಬಳಿ ಇಟ್ಟು ಪೂಜೆ ಸಲ್ಲಿಸಿದರು.

ಈ ವೇಳೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಪುತ್ರ ವಿಜಯೇಂದ್ರ, ಶಾಸಕ ಎಸ್‌.ಆರ್. ವಿಶ್ವನಾಥ್ ಮತ್ತಿತರರು ಇದ್ದರು. ಹಸಿರು ಶಾಲು ಹೊತ್ತು ಆಗಮಿಸಿದ ಮುಖ್ಯಮಂತ್ರಿಯವರನ್ನು ದೇವಸ್ಥಾನದ ಅರ್ಚಕರು ಸ್ವಾಗತಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com