ಬೆಂಗಳೂರು: 2020-21ನೇ ಸಾಲಿನ ಬಜೆಟ್ ಮಂಡನೆಗೂ ಮುನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗ್ಗೆ ಮಲ್ಲೇಶ್ವರಂನಲ್ಲಿರುವ ಗಣಪತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಬಜೆಟ್ ಪ್ರತಿ ಇರುವ ಸೂಟ್ಕೇಸ್ನೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ವಿಘ್ನ ನಿವಾರಕನಿಗೆ ಪೂಜೆ ಸಲ್ಲಿಸಿದರು.
ಈ ವೇಳೆ ಸೂಟ್ಕೇಸನ್ನು ಅರ್ಚಕರಿಗೆ ನೀಡಿ ಪೂಜೆ ಸಲ್ಲಿಸುವಂತೆ ಕೋರಿದರು. ಅದರಂತೆ ಅರ್ಚಕರು ಕೆಲವು ನಿಮಿಷಗಳ ಕಾಲ ಸೂಟ್ಕೇಸ್ ಅನ್ನು ದೇವರ ಪ್ರತಿಮೆಯ ಬಳಿ ಇಟ್ಟು ಪೂಜೆ ಸಲ್ಲಿಸಿದರು.
ಈ ವೇಳೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಪುತ್ರ ವಿಜಯೇಂದ್ರ, ಶಾಸಕ ಎಸ್.ಆರ್. ವಿಶ್ವನಾಥ್ ಮತ್ತಿತರರು ಇದ್ದರು. ಹಸಿರು ಶಾಲು ಹೊತ್ತು ಆಗಮಿಸಿದ ಮುಖ್ಯಮಂತ್ರಿಯವರನ್ನು ದೇವಸ್ಥಾನದ ಅರ್ಚಕರು ಸ್ವಾಗತಿಸಿದರು.
Advertisement