ಕೃಷಿಗೆ ಒತ್ತು ನೀಡಿದ ಸಮಗ್ರ ಬಜೆಟ್- ಬಿ. ಸಿ. ಪಾಟೀಲ್ 

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಡಿಸಿರುವ ಬಜೆಟ್ ಕೃಷಿಗೆ ಪೂರಕವಾಗಿದ್ದು ಇದು ರೈತರ ಅಭಿವೃದ್ಧಿಗೆ ಮಂಡಿಸಿದ ಸಮಗ್ರ ಬಜೆಟ್ ಆಗಿದೆ ಎಂದು ಕೃಷಿ ಸಚಿವರಾದ ಬಿ‌.ಸಿ.ಪಾಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ
ಬಿ. ಸಿ. ಪಾಟೀಲ್
ಬಿ. ಸಿ. ಪಾಟೀಲ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಡಿಸಿರುವ ಬಜೆಟ್ ಕೃಷಿಗೆ ಪೂರಕವಾಗಿದ್ದು ಇದು ರೈತರ ಅಭಿವೃದ್ಧಿಗೆ ಮಂಡಿಸಿದ ಸಮಗ್ರ ಬಜೆಟ್ ಆಗಿದೆ ಎಂದು ಕೃಷಿ ಸಚಿವರಾದ ಬಿ‌.ಸಿ.ಪಾಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ

ಆಯವ್ಯಯ ಮಂಡನೆ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದ ರೈತರು ಎಂದು ಹೆಮ್ಮೆಯಿಂದ ಹೇಳಿಕೊಳ್ಳಲು ಭಾವಚಿತ್ರಯುಕ್ತ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಜಾರಿಗೆ ತರಲಾಗಿದೆ‌.ಹನಿ ನೀರಾವರಿಗೆ ಆದ್ಯತೆ ನೀಡಿದ್ದಾರೆ.
ಫಸಲ್ ಭೀಮಾ ಯೋಜನೆಗೆ 900ಕೋಟಿ ಹಣ ಮೀಸಲಿಟ್ಟಿದ್ದಾರೆ‌ ಎಂದು ತಿಳಿಸಿದರು.

ಫಸಲ್ ಭೀಮಾ ಯೋಜನೆಯ ರಾಜ್ಯದ ವಿಮಾ ಕಂತಿನ ಪಾಲು 900ಕೋಟಿ ರೂ.ಬಿಡುಗಡೆಯಾಗಿದೆ .ರೈತರ ಮನೆಬಾಗಿಲಿನಲ್ಲಿಯೇ  ಮಣ್ಣು,ನೀರು ಪರೀಕ್ಷೆ ಮತ್ತು ಇತರೆ ತಾಂತ್ರಿಕ ನೆರವಿಗಾಗಿ ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್ ಆರಂಭಿಸಲಾಗುವುದು ಎಂದರು.

ಸಾವಯವ ಕೃಷಿಯನ್ನು ಪ್ರೋತ್ಸಾಹಕ್ಕಾಗಿ 200 ಕೋಟಿ ರೂ.ಗಳನ್ನು ಒದಗಿಸಲಾಗುವುದು.ಒಟ್ಟಾರೆಯಾಗಿ ರೈತರ ಆದಾಯ ದ್ವಿಗುಣಗೊಳಿಸಲು ಅನ್ನದಾತರ ಬದುಕನ್ನು ಹಸನುಮಾಡಲು ಇಲಾಖೆ ಹಾಗೂ ಸರ್ಕಾರ ಬದ್ಧವಾಗಿದೆ .ಇನ್ನಷ್ಟು ಹೊಸಹೊಸ ಯೋಜನೆಗಳನ್ನು ಹಾಗೂ ರೈತರಿಗಾಗಿ ಪ್ರಾತ್ಯಕ್ಷಿಕೆಗಳನ್ನು ಸಹ ಮಾಡಲಾಗುವುದು ಎಂದಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com