ಬಜೆಟ್ ಪೂರ್ವ ಸಭೆ: ರಾಜ್ಯ, ಕೇಂದ್ರಾಡಳಿತ ವಿತ್ತ ಸಚಿವರೊಂದಿಗೆ ನಿರ್ಮಲಾ ಸೀತಾರಾಮನ್ ಚರ್ಚೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರೊಂದಿಗೆ ಬಜೆಟ್ ಪೂರ್ವ ಸಮಾಲೋಚನೆ ನಡೆಸಿದರು.
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
Updated on

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರೊಂದಿಗೆ ಬಜೆಟ್ ಪೂರ್ವ ಸಮಾಲೋಚನೆ ನಡೆಸಿದರು.

ಸಭೆಯಲ್ಲಿ ಗೋವಾ, ಹರಿಯಾಣ ಮತ್ತು ಪುದುಚೇರಿ ಮುಖ್ಯಮಂತ್ರಿಗಳು, ಅರುಣಾಚಲ ಪ್ರದೇಶ, ಬಿಹಾರ, ದೆಹಲಿ, ತಮಿಳುನಾಡು ಮತ್ತು ತ್ರಿಪುರದ ಉಪಮುಖ್ಯಮಂತ್ರಿಗಳು ಮತ್ತು ತಮ್ಮ ರಾಜ್ಯಗಳನ್ನು ಪ್ರತಿನಿಧಿಸುವ 17 ಹಣಕಾಸು ಮಂತ್ರಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.

ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಸರ್ಕಾರದ "ಸಹಕಾರಿ ಫೆಡರಲಿಸಂ" ತತ್ತ್ವಶಾಸ್ತ್ರ ಮತ್ತು ಆರ್ಥಿಕತೆಯ ಬೆಳವಣಿಗೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಕೈಗೊಂಡ ಕ್ರಮಗಳನ್ನು ಸ್ಪಷ್ಟಪಡಿಸಿದರು.

ರಾಜ್ಯ ಸರ್ಕಾರಗಳು ತಮ್ಮ ಅಭಿಪ್ರಾಯಗಳನ್ನು ಮಂಡಿಸುವ ಅವಕಾಶವನ್ನು ಸ್ವಾಗತಿಸಿದವು ಮತ್ತು ಬೆಳವಣಿಗೆ, ಹೂಡಿಕೆ, ಸಂಪನ್ಮೂಲ ಅಗತ್ಯತೆ ಮತ್ತು ಹಣಕಾಸಿನ ನೀತಿ ಕುರಿತು ತಮ್ಮ ಸಲಹೆಗಳನ್ನು ವ್ಯಕ್ತಪಡಿಸಿದವು. 5 ಟ್ರಿಲಿಯನ್ ಯುಎಸ್ಡಿ ಆರ್ಥಿಕತೆಯನ್ನು ಸಾಧಿಸಲು ರಾಜ್ಯಗಳು ಮತ್ತು ಕೇಂದ್ರಗಳ ನಡುವಿನ ಸಹಕಾರವನ್ನು ಬಲಪಡಿಸುವ ಕ್ರಮಗಳ ಬಗ್ಗೆಯೂ ಅವರಿಗೆ ಸೂಚಿಸಲಾಗಿದೆ.

ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಕೃಷಿ ಮತ್ತು ಕೃಷಿ ಸಂಸ್ಕರಣಾ ಕ್ಷೇತ್ರಗಳ ವಿವಿಧ ಪಾಲುದಾರರ ಗುಂಪುಗಳೊಂದಿಗೆ ಬಜೆಟ್ ಪೂರ್ವ ಸಮಾಲೋಚನೆ ನಡೆಸಿದರು. ಅವರು ಕೈಗಾರಿಕೆ, ವ್ಯಾಪಾರ ಮತ್ತು ಸೇವಾ ಕ್ಷೇತ್ರಗಳ ಮಧ್ಯಸ್ಥಗಾರರ ಗುಂಪುಗಳೊಂದಿಗೆ ಸಮಾಲೋಚನೆ ನಡೆಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com