ಬಿಎಸ್ ವೈ ಬಜೆಟ್ ನಲ್ಲಿ ಸಾರಿಗೆ ಇಲಾಖೆಗೆ ಸಿಕ್ಕಿದ್ದೇನು?

ಮಹಾಮಾರಿ ಕೊರೋನಾ ವೈರಸ್ ನಿಂದಾಗಿ ಭಾರೀ ನಷ್ಟ ಅನುಭವಿಸುತ್ತಿರುವ ಸಾರಿಗೆ ಇಲಾಖೆಗೆ  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಮಂಡಿಸಿದ...
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ
Updated on

ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ನಿಂದಾಗಿ ಭಾರೀ ನಷ್ಟ ಅನುಭವಿಸುತ್ತಿರುವ ಸಾರಿಗೆ ಇಲಾಖೆಗೆ  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಮಂಡಿಸಿದ 2021-22ನೇ ಸಾಲಿನ ಬಜೆಟ್ ನಲ್ಲಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.

2020-21ರ ಹಣಕಾಸು ವರ್ಷದಲ್ಲಿ ಸಾರಿಗೆ ಇಲಾಖೆ 7,115 ಕೋಟಿ ರೂ.ಗಳ ಆದಾಯವನ್ನು ನಿರೀಕ್ಷಿಸಲಾಗಿತ್ತು. ಆದರೆ ಜನವರಿ ಅಂತ್ಯಕ್ಕೆ 4,294  ಕೋಟಿ ರೂ. ಮಾತ್ರ ಆದಾಯ ಸಂಗ್ರಹವಾಗಿದೆ.

2021-22ರ ಸಾಲಿನಲ್ಲಿ 7,515 ಕೋಟಿ ರೂ. ಆದಯಾ ಸಂಗ್ರಹಣೆಯ ಗುರಿಯನ್ನು ಹಾಕಲಾಗಿದೆ. ಈ ವರ್ಷ ರಾಜ್ಯದಲ್ಲಿ 52 ಬಸ್‌ ನಿಲ್ದಾಣ, 16 ಬಸ್‌ ಘಟಕಗಳ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಪ್ರಸ್ತಾಪ ಮಾಡಲಾಗಿದೆ.

ಸಿಎಂ ಯಡಿಯೂರಪ್ಪ ಅವರು ಮಹಿಳೆಯರಿಗೆ ಬಿಎಂಟಿಸಿ ಬಸ್‌ಪಾಸ್‌ನಲ್ಲಿ ರಿಯಾಯಿತಿ ನೀಡುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com