ಬೆಂಗಳೂರು: ಆರ್ಥಿಕ ಸಚಿವರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದು, ಶಿಕ್ಷಣ ಕ್ಷೇತ್ರಕ್ಕೆ ಭಾರೀ ಅನುದಾನವನ್ನು ಘೋಷಿಸಿದ್ದಾರೆ.
ತಮ್ಮ ಚೊಚ್ಚಲ ಬಜೆಟ್ ಗೆ ತ್ರಿವಳಿ ಸೂತ್ರ 3E ( ಶಿಕ್ಷಣ, ಉದ್ಯೋಗ, ಸಬಲೀಕರಣ) ಅನುಸರಿಸುವ ಬೊಮ್ಮಾಯಿಯವರು, ಶಿಕ್ಷಣ ಇಲಾಖೆಗೆ ರೂ.31,980 ಕೋಟಿ ಅನುದಾನವನ್ನು ಮೀಸಲಿಟ್ಟಿದ್ದಾರೆ.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಉತ್ತಮಪಡಿಸಲು ಹೋಬಳಿ ಮಟ್ಟದಲ್ಲಿ ಮೂಲಭೂತ ಸೌಕರ್ಯವಿರುವ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಉನ್ನತೀಕರಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿರುವುದಾಗಿ ಘೋಷಿಸಿದ್ದಾರೆ.
ಅಲ್ಲದೇ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಮಾರ್ಗಸೂಚಿಯಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಿಕ್ಷಣ, ಶಿಕ್ಷಕರ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯ ಕ್ರಮ ರಚಿಸಲಾಗುವುದು ಎಂದು ಹೇಳಿದರು. ಅಲ್ಲದೇ ಮುಂದಿನ ವರ್ಷದಿಂದ ಎನ್ ಇಪಿ ರಾಜ್ಯಾದ್ಯಂತ ಜಾರಿಯಾಗಲಿದೆ ಎಂದು ತಿಳಿಸಿದರು.
ತಮ್ಮ ಚೊಚ್ಚಲ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬೊಮ್ಮಾಯಿಯವರು ಘೋಷಿಸಿರುವ ಕೊಡುಗೆಗಳು ಇಂತಿವೆ...
Advertisement