ರಾಜ್ಯ ಬಜೆಟ್ ಮಂಡನೆ: ಹಣಕಾಸು ಇಲಾಖೆ ಅಧಿಕಾರಿಗಳಿಂದ ಬಜೆಟ್ ಪ್ರತಿ ಸಿಎಂಗೆ ಹಸ್ತಾಂತರ, ಮುಖ್ಯಮಂತ್ರಿಗಳಿಂದ ಟೆಂಪಲ್ ರನ್

ರಾಜ್ಯ ಬಜೆಟ್‌ಗೆ ಕ್ಷಣಗಣನೆ ಆರಂಭವಾಗಿದ್ದು, 2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಇಂದು ಬೆಳಗ್ಗೆ ಹಸ್ತಾಂತರಿಸಿದರು. 
2023ನೇ ಸಾಲಿನ ಬಜೆಟ್ ಪ್ರತಿ ಹಸ್ತಾಂತರ
2023ನೇ ಸಾಲಿನ ಬಜೆಟ್ ಪ್ರತಿ ಹಸ್ತಾಂತರ

ಬೆಂಗಳೂರು: ರಾಜ್ಯ ಬಜೆಟ್‌ಗೆ ಕ್ಷಣಗಣನೆ ಆರಂಭವಾಗಿದ್ದು, 2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಇಂದು ಬೆಳಗ್ಗೆ ಹಸ್ತಾಂತರಿಸಿದರು. 

ಇದಾದ ಬಳಿಕ ಮುಖ್ಯಮಂತ್ರಿ ಬೊಮ್ಮಾಯಿಯವರ ತಮ್ಮ ನಿವಾಸ ಆರ್ ಟಿ ನಗರದ ಹತ್ತಿರವಿರುವ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.

ಇದಕ್ಕೂ ಮೊದಲು ಬಾಲಬ್ರೂಯಿ ಅತಿಥಿ ಗೃಹದ ಬಳಿಯಿರುವ ಸೆವೆನ್ ಮಿನಿಸ್ಟರ್ಸ್ ಕ್ವಾಟ್ರಸ್ ಹತ್ತಿರದ ಆಂಜನೇಯ ದೇವಸ್ಥಾನಕ್ಕೆ ಕೂಡ ಹೋಗಿ ನಾಡಿನ ಜನರ ಹೆಸರಿನಲ್ಲಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಜೊತೆ ಸಂಪುಟದ ಹಲವು ಸಚಿವರು ಕೂಡ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. 

ಇಡೀ ರಾಜ್ಯದ ಮಹಾಜನತೆಗೆ ಒಳ್ಳೆಯದಾಗಲಿ ಎಂದು ದೇವರ ಮುಂದೆ ಪ್ರಾರ್ಥನೆ ಸಲ್ಲಿಸಿದೆನು ಎಂದು ಸುದ್ದಿಗಾರರಿಗೆ ಮುಖ್ಯಮಂತ್ರಿಗಳು ತಿಳಿಸಿದರು. 

ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸುತ್ತಿರುವ ಕನೆಯ ಬಜೆಟ್ ಇದಾಗಿದ್ದು ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ವಿವಿಧ ವಲಯಗಳಲ್ಲಿ ಬೆಟ್ಟದಷ್ಟು ನಿರೀಕ್ಷೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com