ರಾಜ್ಯಗಳ ಸಕ್ರಿಯ ಒಳಗೊಳ್ಳುವಿಕೆಯೊಂದಿಗೆ ಪ್ರವಾಸೋದ್ಯಮಕ್ಕೆ ಒತ್ತು: ನಿರ್ಮಲಾ ಸೀತಾರಾಮನ್

ಪ್ರವಾಸೋದ್ಯಮ ಪ್ರಚಾರವನ್ನು ರಾಜ್ಯಗಳ ಸಕ್ರಿಯ ಭಾಗವಹಿಸುವಿಕೆ, ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ 'ಮಿಷನ್ ಮೋಡ್'ನಲ್ಲಿ ತೆಗೆದುಕೊಳ್ಳಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು 2023-24 ರ ಕೇಂದ್ರ ಬಜೆಟ್‌ನಲ್ಲಿ ಬುಧವಾರ ಘೋಷಿಸಿದ್ದಾರೆ.
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
Updated on

ನವದೆಹಲಿ: ಪ್ರವಾಸೋದ್ಯಮ ಪ್ರಚಾರವನ್ನು ರಾಜ್ಯಗಳ ಸಕ್ರಿಯ ಭಾಗವಹಿಸುವಿಕೆ, ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ 'ಮಿಷನ್ ಮೋಡ್'ನಲ್ಲಿ ತೆಗೆದುಕೊಳ್ಳಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು 2023-24 ರ ಕೇಂದ್ರ ಬಜೆಟ್‌ನಲ್ಲಿ ಬುಧವಾರ ಘೋಷಿಸಿದ್ದಾರೆ.

ತಮ್ಮ ಭಾಷಣದಲ್ಲಿ, ದೇಶವು ದೇಶೀಯ ಮತ್ತು ವಿದೇಶಿ ಪ್ರವಾಸಿಗರಿಗೆ 'ಅಗಾಧ ಆಕರ್ಷಣೆ' ನೀಡುತ್ತದೆ. ಪ್ರವಾಸೋದ್ಯಮದಲ್ಲಿ ಹೆಚ್ಚಿನ ಅವಕಾಶವಿದೆ. ಈ ವಲಯವು ವಿಶೇಷವಾಗಿ ಯುವಕರಿಗೆ ಉದ್ಯೋಗಗಳು ಮತ್ತು ಉದ್ಯಮಶೀಲತೆಗೆ ದೊಡ್ಡ ಅವಕಾಶಗಳನ್ನು ಹೊಂದಿದೆ ಎಂದು ಅವರು ಒತ್ತಿ ಹೇಳಿದರು.

'ರಾಜ್ಯಗಳ ಸಕ್ರಿಯ ಭಾಗವಹಿಸುವಿಕೆ, ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಮಿಷನ್ ಮೋಡ್‌ನಲ್ಲಿ ಕಾರ್ಯನಿರ್ವಹಿಸಲಾಗುವುದು' ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com