ನವದೆಹಲಿ: ಇದು ಅಮೃತಕಾಲದ ಮೊದಲ ಬಜೆಟ್. ಇದು ಹಿಂದಿನ ಬಜೆಟ್ಗಳ ದೃಢವಾದ ಅಡಿಪಾಯಗಳ ಮೇಲೆ ಸಿದ್ಧಗೊಂಡಿದೆ. ನಮ್ಮ ಯುವಕರು, ಮಹಿಳೆಯರು ಮತ್ತು ದಲಿತರ ಅಭಿವೃದ್ಧಿಗೆ ಬದ್ಧತೆ ತೋರುವ ಬಜೆಟ್ ಇದು ಎಂದು ಹೇಳಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಇಂದು ಮಂಡನೆ ಮಾಡಿರುವ ಬಜೆಟ್'ನ 7 ಅಂಶಗಳನ್ನು ಹೆಸರಿಸಿದ್ದಾರೆ.
ಏಳು ಅಂಶಗಳು ಇಂತಿವೆ...
ಬಜೆಟ್ನ ಮೊದಲ ಆಧಾರ ಸ್ತಂಭವಾಗಿರುವ ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಗೆ ಕೇಂದ್ರ ಹಣಕಾಸು ಸಚಿವರು ಹೆಚ್ಚಿನ ಒತ್ತು ನೀಡಿದ್ದು. ಬಹಳಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ.
ಕೊವಿಡ್ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಭಾರತವು ಉಜ್ವಲ ಭವಿಷ್ಯದತ್ತ ಹೆಜ್ಜೆ ಹಾಕುತ್ತಿದೆ. ಇದನ್ನು ವಿಶ್ವಮಟ್ಟದ ಹಲವು ಸಂಸ್ಥೆಗಳು ಗುರುತಿಸಿವೆ. ಕೋವಿಡ್ ಸಂಕಷ್ಟ ಸಂದರ್ಭದಲ್ಲಿ ಯಾವುದೇ ಭಾರತೀಯರು ಹಸಿವಿನಿಂದ ಬಳಲಲು ಅವಕಾಶ ನೀಡಲಿಲ್ಲ. 80 ಕೋಟಿ ಜನರಿಗೆ ಆಹಾರ ಒದಗಿಸಲಾಯಿತು ಎಂದು ಹೇಳಿದರು.
ಬಜೆಟ್ ಭಾಷಣದ ಆರಂಭದಲ್ಲಿ ಕೇಂದ್ರ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಪ್ರಗತಿಯನ್ನು ನಿರ್ಮಲಾ ಸೀತಾರಾನ್ ಅವರು ವಿವರಿಸಿದರು.
ದೀನ್ದಯಾಳ್ ಅಂತ್ಯೋದಯ ಯೋಜನೆ, ಕೌಶಲಾಭಿವೃದ್ಧಿ ಯೋಜನೆ, ಮುದ್ರಾ ಸೇರಿದಂತೆ ಹಲವು ಯೋಜನೆಗಳ ಬಗ್ಗೆ ನಿರ್ಮಲಾ ಗಮನ ಸೆಳೆದರು. ಪ್ರಗತಿಯ ಅಂಕಿಅಂಶಗಳನ್ನು ಮಂಡಿಸಿದರು.
Advertisement