social_icon

ಬಿಯಾಂಡ್ ಬಜೆಟ್: ದಣಿವರಿಯದೆ ಆಯವ್ಯಯ ಸಿದ್ದಪಡಿಸಿದ ನಿರ್ಮಲಾ ಸೀತಾರಾಮನ್ ಟೀಮ್ ನ ಮಾಸ್ಟರ್ ಮೈಂಡ್ಸ್ ಇವರೇ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2023 ರ ಬಜೆಟ್ ಹಿಂದೆ ದಣಿವರಿಯದೆ ಕೆಲಸ ಮಾಡುವ ತಂಡ ಹೊಂದಿದೆ.

Published: 01st February 2023 12:46 PM  |   Last Updated: 01st February 2023 06:51 PM   |  A+A-


nirmala sitharamans team of bureaucrats and advisors behind budget

ಆಯವ್ಯಯ ಸಿದ್ದಪಡಿಸಿದ ನಿರ್ಮಲಾ ಸೀತಾರಾಮನ್ ಟೀಮ್

Posted By : Shilpa D
Source : Online Desk

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2023 ರ ಬಜೆಟ್ ಹಿಂದೆ ದಣಿವರಿಯದೆ ಕೆಲಸ ಮಾಡುವ ತಂಡ ಹೊಂದಿದೆ. ಈ ವರ್ಷದ ಯೂನಿಯನ್ ಬಜೆಟ್ 2023 ರ ತಯಾರಿಯ ಹಿಂದೆ ಅಧಿಕಾರಿಗಳು ಮತ್ತು ಸಲಹೆಗಾರರ ತಂಡ ಇಲ್ಲಿದೆ.

ಕೇಂದ್ರದಲ್ಲಿ 2014ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದ ಬಳಿಕ ಮಂಡನೆಯಾಗುತ್ತಿರುವ ಸತತ 11ನೇ ಬಜೆಟ್‌ ಇದಾಗಿದೆ. ನಿರ್ಮಲಾ ಸೀತಾರಾಮನ್‌ ಅವರು ಈ ಬಜೆಟ್‌ ಮಂಡಿಸುತ್ತಿದ್ದಾರಾದರೂ, ಅದರ ತಯಾರಿಕೆಯಲ್ಲಿ ಹಲವು ಉನ್ನತಾಧಿಕಾರಿಗಳು ಹಾಗೂ ಸಲಹೆಗಾರರು ಪಾತ್ರ ವಹಿಸಿದ್ದಾರೆ. ಅಂತಹ ಕೆಲವು ಪ್ರಮುಖರ ಮಾಹಿತಿ ಇಲ್ಲಿದೆ.

ಟಿ.ವಿ. ಸೋಮನಾಥನ್‌: ಹಣಕಾಸು ಕಾರ್ಯದರ್ಶಿ
ತಮಿಳುನಾಡು ಕೆಡರ್‌ನ 1987ರ ಬ್ಯಾಚ್‌ನ ಐಎಎಸ್‌ ಅಧಿಕಾರಿ. ಇವರು ಈ ಮೊದಲು ಅವರು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ಮತ್ತು 2015–2017 ರ ಅವಧಿಯಲ್ಲಿ ಪ್ರಧಾನಿ ಮೋದಿ ಅವರಿಗೆ ಜಂಟಿ ಕಾರ್ಯದರ್ಶಿಯಾಗಿದ್ದರು. ಈ ಹಿಂದೆ ವಿಶ್ವ ಬ್ಯಾಂಕ್‌ನ ಬಜೆಟ್‌ ಪಾಲಿಸಿ ಸಮಿತಿಯ ವ್ಯವಸ್ಥಾಪಕರಾಗಿಯೂ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ವಿವೇಕ್‌ ಜೋಶಿ: ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿ
ಡಾ. ವಿವೇಸ್ ಜೋಶಿ ಅವರು 1989ರ ಬ್ಯಾಚ್‌ನ ಐಎಎಸ್‌ ಅಧಿಕಾರಿ. ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿಯಾಗಿ, ಬ್ಯಾಂಕಿಂಗ್‌ಗೆ ಸಂಬಂಧಿಸಿದ ನೀತಿಗಳು, ಯೋಜನೆಗಳ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದಾರೆ. ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (ಆರ್‌ಬಿಐ) ಮಂಡಳಿಯ ಸದಸ್ಯರೂ ಆಗಿರುವ ಜೋಶಿ, ಇದಕ್ಕೂ ಮೊದಲು ಕೇಂದ್ರ ಗೃಹ ಸಚಿವಾಲಯದ ಮಹಾನೋಂದಣಿ ಅಧಿಕಾರಿ ಹಾಗೂ ಸೆನ್ಸಸ್‌ ಆಯುಕ್ತರಾಗಿದ್ದರು.

ಸಂಜಯ್‌ ಮಲ್ಹೋತ್ರಾ: ಕಂದಾಯ ಕಾರ್ಯದರ್ಶಿ
ರಾಜಸ್ಥಾನ ಕೆಡರ್‌ನ 1990ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಸಂಜಯ್‌ ಮಲ್ಹೋತ್ರಾ, ಕಂದಾಯ ಇಲಾಖೆ ಕಾರ್ಯದರ್ಶಿಯಾಗಿ ನೇಮಕವಾಗುವುದಕ್ಕೂ ಮುನ್ನ ಗ್ರಾಮೀಣ ವಿದ್ಯುದೀಕರಣ ನಿಗಮದ (ಆರ್‌ಇಸಿ) ಮುಖ್ಯಸ್ಥರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಐಐಟಿ ಕಾನ್ಪುರದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ.

ಅಜಯ್‌ ಸೇಥ್‌: ಆರ್ಥಿಕ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ
ಕರ್ನಾಟಕ ಕೆಡರ್‌ನ 1987ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಅಜಯ್‌ ಸೇಥ್‌, ಸಾರ್ವಜನಿಕ ಹಣಕಾಸು ವಲಯದಲ್ಲಿ 33 ವರ್ಷಗಳ ಅಪಾರ ಅನುಭವ ಹೊಂದಿದ್ದಾರೆ. ಬಜೆಟ್‌, ತೆರಿಗೆ ಮತ್ತು ವಿದೇಶಿ ಹೂಡಿಕೆಯಂತಹ ವಿಚಾರಗಳಲ್ಲಿ ನುರಿತ ಜ್ಞಾನ ಹೊಂದಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ, ವಾಣಿಜ್ಯ ತೆರಿಗೆ ಆಯುಕ್ತ ಸೇರಿದಂತೆ ಕರ್ನಾಟಕ ಸರ್ಕಾರದ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದಾರೆ. ಸಾರ್ವಜನಿಕ ಆಡಳಿತದಲ್ಲಿನ ಅತ್ಯುತ್ತಮ ಸೇವೆಗಾಗಿ ನೀಡುವ ಪ್ರಧಾನ ಮಂತ್ರಿಗಳ ಪ್ರಶಸ್ತಿಯನ್ನು 2013ರಲ್ಲಿ ಪಡೆದಿರುವ ಸೇಥ್‌, ಏಷಿಯಾ ಅಭಿವೃದ್ಧಿ ಬ್ಯಾಂಕ್‌ನ ಸಲಹೆಗಾರರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ.

ತುಹಿನ್‌ ಕಾಂತ ಪಾಂಡೆ: ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆಯ ಕಾರ್ಯದರ್ಶಿ
ಎಲ್‌ಐಸಿ ಹಾಗೂ ಏರ್‌ ಇಂಡಿಯಾ ಸೇರಿದಂತೆ ಹಲವು ಸಂಸ್ಥೆಗಳಲ್ಲಿನ ಬಂಡವಾಳ ಹಿಂತೆಗೆದ ರೂವಾರಿಯಾಗಿರುವ ತುಹಿನ್‌ ಪಾಂಡೆ, ಒಡಿಶಾ ಕೆಡರ್‌ನ 1987ರ ಬ್ಯಾಚ್‌ನ ಐಎಎಸ್‌ ಅಧಿಕಾರಿ. ಕೈಗಾರಿಕಾ ಅಭಿವೃದ್ಧಿ, ಸಾರ್ವಜನಿಕ ಹಣಕಾಸು ಮತ್ತು ಆರ್ಥಿಕ ನಿರ್ವಹಣೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಯೋಜನಾ ಆಯೋಗಕ್ಕೆ ಐದು ವರ್ಷಗಳ ಅವಧಿಗೆ ಜಂಟಿ ಕಾರ್ಯದರ್ಶಿಯಾಗಿ 2009ರಲ್ಲಿ ನೇಮಕವಾದ ಇವರು, ನಂತರ ಸಂಸದೀಯ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ 2 ವರ್ಷಗಳ ಅವಧಿಗೆ ನೇಮಕಗೊಂಡಿದ್ದರು.

ವಿ. ಅನಂತ ನಾಗೇಶ್ವರನ್‌: ಮುಖ್ಯ ಆರ್ಥಿಕ ಸಲಹೆಗಾರ
ವಿ. ಅನಂತ ನಾಗೇಶ್ವರನ್‌ ಅವರು ಮುಖ್ಯ ಆರ್ಥಿಕ ಸಲಹೆಗಾರರಾಗಿ 2022ರ ಜನವರಿ 28ರಂದು ನೇಮಕವಾದರು. ಇವರು ಐಐಎಂ ಅಹಮದಾಬಾದ್‌ ಹಾಗೂ ಮೆಸ್ಸಾಚುಸೆಟ್ಸ್‌ ವಿವಿ ವಿದ್ಯಾರ್ಥಿಯಾಗಿದ್ದು, 2019–2021ರ ಅವಧಿಯಲ್ಲಿ ಪ್ರಧಾನಿ ಮೋದಿ ಅವರ ಆರ್ಥಿಕ ಸಲಹಾ ಸಮಿತಿಯ ಅರೆಕಾಲದ ಸದಸ್ಯರಾಗಿದ್ದರು.


Stay up to date on all the latest ಕೇಂದ್ರ ಬಜೆಟ್ news
Poll
Railways Minister Ashwini Vaishnaw waves at a goods train as train services resume

ಒಡಿಶಾದಲ್ಲಿ ಭೀಕರ ರೈಲು ಅಪಘಾತದ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವರು ರಾಜೀನಾಮೆ ನೀಡಬೇಕೇ?


Result
ಹೌದು
ಬೇಡ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp