ಪಿಂಚಣಿದಾರರ 'ಸಂಕಲ್ಪ' ಸೇವೆ

ಲಕ್ಷಾಂತರ ಪಿಂಚಣಿದಾರರಿಗೆ ಸಿಹಿಸುದ್ದಿ. ವಿವಿಧ ಜನಕಲ್ಯಾಣ ಯೋಜನೆಗಳ ಅನುಷ್ಠಾನಕ್ಕೆ ಪಿಂಚಣಿದಾರರ ಸೇವೆಯನ್ನು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಲಕ್ಷಾಂತರ ಪಿಂಚಣಿದಾರರಿಗೆ ಸಿಹಿಸುದ್ದಿ. ವಿವಿಧ ಜನಕಲ್ಯಾಣ ಯೋಜನೆಗಳ ಅನುಷ್ಠಾನಕ್ಕೆ ಪಿಂಚಣಿದಾರರ ಸೇವೆಯನ್ನು ಬಳಸಿಕೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಪಿಂಚಣಿ ಮತ್ತು ಪಿಂಚಣಿದಾರರ ಕ್ಷೇಮಾಭಿವೃದ್ಧಿ ಇಲಾಖೆ (ಡಿಪಿಪಿಡಬ್ಯು)ಯು 'ಸಂಕಲ್ಪ' ಎಂಬ ಯೋಜನೆಯನ್ನು ಆರಂಭಿಸಿದ್ದು, ಸ್ವಯಂಪ್ರೇರಿತರಾಗಿ ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಳ್ಳಲು ಬಯಸುವ ಪಿಂಚಣಿದಾರರಿಗೆ ಅವಕಾಶ ನೀಡಲು ಮುಂದಾಗಿದೆ.

ಪಿಂಚಣಿದಾರರ ಅನುಭವ ಮತ್ತು ಕೌಶಲವನ್ನು ಅರ್ಥಪೂರ್ಣ ಸಾಮಾಜಿಕ ಚಟುವಟಿಕೆಗಳಲ್ಲಿ ಬಳಸುವ ಉದ್ದೇಶದಿಂದ ಪ್ರಾಯೋಗಿಕವಾಗಿ ಈ ಯೋಜನೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com