ನಿರೀಕ್ಷಿತ ಪ್ರಮಾಣದಲ್ಲಿ ತರಕಾರಿ ಮಾರುಕಟ್ಟೆಗೆ ಬಾರದಿರುವುದು ಒಂದೆಡೆಯಾದರೆ, ಅಕ್ಕಪಕ್ಕದ ರಾಜ್ಯಗಳಲ್ಲಿ ಭಾರಿ ಮಳೆ ಪರಿಣಾಮ, ಅಲ್ಲಿಂದಲೂ ಬೇಡಿಕೆ ಹೆಚ್ಚಿದೆ. ಹೀಗಾಗಿ, ಎಲ್ಲಾ ರೀತಿಯ ತರಕಾರಿಗಳ ಬೆಲೆಗಳೂ ಏರತೊಡಗಿದೆ. ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಹಾಸನ, ಚಾಮರಾಜನಗರ, ಮಂಡ್ಯ ಸೇರಿದಂತೆ ಹಳೇ ಮೈಸೂರು ಭಾಗಗಳಿಂದ ಬೆಂಗಳೂರಿಗೆ ತರಕಾರಿ ಹೆಚ್ಚಿನ ಪ್ರಮಾಣದಲ್ಲಿ ಸರಬರಾಜಾಗುತ್ತದೆ.