ಹಳ್ಳಿಗಳಲ್ಲಿ ಸ್ವಯಂ ಉದ್ಯೋಗ ಸಾಲ

ಇನ್ನು ಮುಂದೆ ಗ್ರಾಮೀಣ ಭಾಗದ ಯುವಕ, ಯುವತಿಯರು ಸ್ವಯಂ ಉದ್ಯೋಗ ಕೈಗೊಳ್ಳಲು ಸರ್ಕಾರ ರು.50,000 ವರೆಗೂ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಇನ್ನು ಮುಂದೆ ಗ್ರಾಮೀಣ ಭಾಗದ ಯುವಕ, ಯುವತಿಯರು ಸ್ವಯಂ ಉದ್ಯೋಗ ಕೈಗೊಳ್ಳಲು ಸರ್ಕಾರ ರು.50,000 ವರೆಗೂ ಜಾಮೀನು ರಹಿತ ಸಾಲ ನೀಡಲು ನಿರ್ಧರಿಸಿದೆ. ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ರಾಜೀವ್‍ಗಾಂಧಿ ಯುವ ಚೈತನ್ಯ ಯೋಜನೆಯಡಿ ಈ ಸೌಲಭ್ಯ ನೀಡಲು ತೀರ್ಮಾಸಲಾಗಿದ್ದು, ಇದಕ್ಕಾಗಿ ಗ್ರಾಮೀಣ ವಿಕಾಸ ಬ್ಯಾಂಕ್ ಸಾಲ ಸೌಲಭ್ಯ ನೀಡಲು ಮುಂದೆ ಬಂದಿದೆ. 

ಗ್ರಾಮೀಣಭಿವೃದ್ಧಿ, ಪಂಚಾಯತ್ ರಾಜ್  ಮತ್ತು ಗ್ರಾಮೀಣ ವಿಕಾಸ ಬ್ಯಾಂಕ್ ನಡುವೆ ಗುರುವಾರ ಗಾಂಧಿಭವನದಲ್ಲಿ ನಡೆದ ಎಂಜಿನಿ ಯರ್‍ಗಳ ಸಂಕಲ್ಪ ದಿನ ಕಾರ್ಯ ಕ್ರಮದಲ್ಲಿ ಈ ಬಗ್ಗೆ ಒಪ್ಪಂದ ಮಾಡಿಕೊಳ್ಳಲಾಯಿತು. ಇಲಾಖೆಯ ¸ಸಚಿವ ಎಚ್ಕೆ ಪಾಟೀಲ್ ಮತ್ತು ಗ್ರಾಮೀಣ ವಿಕಾಸ ಬ್ಯಾಂಕ್ ನ ಹಿರಿಯ ಅಧಿಕಾರಿಗಳೊಂದಿಗೆ ಮಾಡಿಕೊಂಡ ಒಪ್ಪಂದಕ್ಕೆ ಸಹಿ ಹಾಕಿದರು. 
ಗ್ರಾಮೀಣ ಯುವ ಜನತೆಗೆ ಸ್ವಾವಲಂಬನೆ ಹೆಚ್ಚಿಸಲು ಇಲಾಖೆ 2013ರಲ್ಲಿ ರಾಜೀವ್ ಗಾಂಧಿ ಯುವ ಚೈತನ್ಯ ಯೋಜನೆ ಆರಂಭಿಸಲಾಗಿತ್ತು. ಆರಂಭದಲ್ಲಿ ಈ ಈ ಯೋಜನೆಯಲ್ಲಿ ಸ್ವಂತ ಉದ್ಯೋಗ ಬಯಸುವ ಯುವಕ, ಯುವತಿಯರಿಗೆ ತರಬೇತಿ ಮತ್ತು ಉದ್ಯೋಗ ಅವಕಾಶಗಳನ್ನು ದೊರಕಿಸಲಾಗುತ್ತಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com