ನವದೆಹಲಿ: ನೌಕರರ ಭವಿಷ್ಯ ನಿಧಿ (ಇಪಿಎಫ್) ಹಣ ಹಿಂಪಡೆಯಲು ನಿರ್ಧರಿಸಿದರೆ, ಆ ಪೈಕಿ ಶೇ.60 ರಷ್ಟು ಮೊತ್ತಕ್ಕೆ ತೆರಿಗೆ ಕಟ್ಟಬೇಕು. ಏಪ್ರಿಲ್ 1 ರಿಂದ ಇಪಿಎಫ್ ಕಟ್ಟುವ ಹಣಕ್ಕೆ ಇದು ಅನ್ವಯವಾಗುತ್ತದೆ ಎಂದು ಕೇಂದ್ರ ಸರ್ಕಾರ ಸೋಮವಾರ ಮಂಡಿಸಿದ ಬಜೆಟ್ ನಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದರು. ಸರ್ಕಾರದ ಈ ನಿರ್ಧಾರಕ್ಕೆ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಜನರ ಸಂದೇಹಗಳಿಗೆ ಸ್ಪಷ್ಟವಾದ ವಿವರಣೆಯನ್ನು ಶೀಘ್ರವೇ ನೀಡುತ್ತೇವೆ ಎಂದು ಕೇಂದ್ರ ವಿತ್ತ ಸಚಿವಾಲಯದ ರಾಜ್ಯ ಸಚಿವ ಜಯಂತ್ ಸಿನ್ಹಾ ಮಂಗಳವಾರ ಹೇಳಿದ್ದಾರೆ.