ಭೂಕಂಪಕ್ಕೆ ಸಿಲುಕಿ ಹಾನಿಗೊಳಗಾದ ಪಗೋಡ ಸಂರಕ್ಷಣೆಗೆ ಭಾರತದ ಸಹಕಾರ

ಮಾಯನ್ಮಾರ್ ನಲ್ಲಿ ಭೂಕಂಪಕ್ಕೆ ಸಿಲುಕಿ ಹಾನಿಗೊಳಗಾದ ಪಗೋಡ ಸಂರಕ್ಷಣೆಗೆ ನೆರವು ನೀಡಲು ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.
ಪಗೋಡಾ
ಪಗೋಡಾ
Updated on
ನವದೆಹಲಿ: ಮಾಯನ್ಮಾರ್ ನಲ್ಲಿ ಭೂಕಂಪಕ್ಕೆ ಸಿಲುಕಿ ಹಾನಿಗೊಳಗಾದ ಪಗೋಡ ಸಂರಕ್ಷಣೆಗೆ ನೆರವು ನೀಡಲು ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. 
ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 6-7 ರಂದು ಮಾಯನ್ಮಾರ್ ಗೆ ಭೇಟಿ ನೀಡಲಿದ್ದು, ಪಗೋಡ ಸಂರಕ್ಷಣೆಗೆ ನೆರವು ನೀಡುವುದರ ಸಂಬಂಧ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ. ಈ ನಿರ್ಧಾರದಿಂದ ಉಭಯ ರಾಷ್ಟ್ರಗಳ ಸಂಬಂಧ ವೃದ್ಧಿಸಲಿದೆ ಎಂದು ಕೇಂದ್ರ ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ. 
ಪಗೋಡಗ ಇರುವ ಮಾಯನ್ಮಾರ್ ನ ಪ್ರದೇಶ ಪ್ರಸಿದ್ಧ ಪ್ರವಾಸಿ ತಾಣವಾಗಿದ್ದು, ಇದನ್ನು ಸಂರಕ್ಷಿಸಲು ನೆರವು ನೀಡುವುದರಿಂದ ಪುರಾತನ ಸ್ಮಾರಕಗಳನ್ನು ರಕ್ಷಿಸುವ ಭಾರತದ ಪರಿಣಿತಿಯೂ ಪ್ರಸಿದ್ಧಿ ಪಡೆಯಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com