ಸಾಲದ ದರಗಳನ್ನು ಕಡಿತಗೊಳಿಸಲು ಆರ್ ಬಿಐ ಬ್ಯಾಂಕುಗಳಿಗೆ ಸೂಚನೆ

ಕಡಿಮೆ ಬಡ್ಡಿ ಮೊತ್ತದ ಪ್ರಯೋಜನಗಳನ್ನು ಬ್ಯಾಂಕುಗಳು ಗ್ರಾಹಕರಿಗೆ ನೀಡಬೇಕು ಎಂದು ಆರ್ ಬಿಐ...
ಹಣಕಾಸು ಸಚಿವ ಅರುಣ್ ಜೇಟ್ಲಿಯವರೊಂದಿಗೆ ಸಭೆಯಲ್ಲಿ ಊರ್ಜಿತ್ ಪಟೇಲ್
ಹಣಕಾಸು ಸಚಿವ ಅರುಣ್ ಜೇಟ್ಲಿಯವರೊಂದಿಗೆ ಸಭೆಯಲ್ಲಿ ಊರ್ಜಿತ್ ಪಟೇಲ್
Updated on
ನವದೆಹಲಿ: ಕಡಿಮೆ ಬಡ್ಡಿ ಮೊತ್ತದ ಪ್ರಯೋಜನಗಳನ್ನು ಬ್ಯಾಂಕುಗಳು ಗ್ರಾಹಕರಿಗೆ ನೀಡಬೇಕು ಎಂದು ಆರ್ ಬಿಐ ಗವರ್ನರ್ ಊರ್ಜಿತ್ ಪಟೇಲ್ ಹೇಳಿದ್ದಾರೆ.
ಹಣಕಾಸು ಸಚಿವ ಅರುಣ್ ಜೇಟ್ಲಿಯವರೊಂದಿಗೆ ಬಜೆಟ್ ನಂತರದ ಆರ್ ಬಿಐ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಆರ್ ಬಿಐಯ ಯೋಜನೆಗಳ ದರದ ಕಡಿತದಿಂದ ಬ್ಯಾಂಕುಗಳಿಗೆ ಪ್ರಯೋಜನವಾಗಿದೆ. ಕಳೆದ ನವೆಂಬರ್-ಡಿಸೆಂಬರ್ ನಲ್ಲಿ ಚಾಲ್ತಿ ಮತ್ತು ಉಳಿತಾಯ ಖಾತೆಗಳಿಗೆ ಕಡಿಮೆ ವೆಚ್ಚದ ಠೇವಣಿಗಳ ಒಳಹರಿವು ಹೆಚ್ಚಾಗಿದೆ. ಸರಾಸರಿ ಸಾಲ ಪ್ರಮಾಣ ಕಡಿತ (ಬ್ಯಾಂಕುಗಳು) ಕಡಿಮೆ ಬಂದಿದೆ. ಗೃಹ ಸಾಲ, ವೈಯಕ್ತಿಕ ಸಾಲದಲ್ಲಿ ಮತ್ತಷ್ಟು ಕಡಿಮೆ ಮಾಡಲು ಬ್ಯಾಂಕುಗಳಿಗೆ ಸಾಧ್ಯತೆಯಿದೆ ಎಂದು ಹೇಳಿದರು.
ಸಾಲ ದರವನ್ನು ವ್ಯಾಪಾರ, ಉದ್ದಿಮೆಗಳಿಗೆ ಕೂಡ ವರ್ಗಾಯಿಸುವಂತೆ ಅವರು ಇದೇ ಸಂದರ್ಭದಲ್ಲಿ ಬ್ಯಾಂಕುಗಳಿಗೆ ಸಲಹೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com