ಕೇಂದ್ರ ಸರ್ಕಾರ ನೋಟು ನಿಷೇಧವನ್ನು ಹೇಗೆ ಕಾರ್ಯಗತಗೊಳಿಸಬೇಕೆಂಬುದನ್ನು ಸರಿಯಾಗಿ ಯೋಜಿಸಲಿಲ್ಲ ಎಂದೂ ರಘುರಾಮ್ ರಾಜನ್ ಅಭಿಪ್ರಾಯಪಟ್ಟಿದ್ದಾರೆ. ಕೇಂಬ್ರಿಡ್ಜ್ ನಲ್ಲಿರುವ ಹಾರ್ವರ್ಡ್ ಕೆನೆಡಿ ಸ್ಕೂಲ್ ನಲ್ಲಿ ಮಾತನಾಡಿರುವ ರಘುರಾಮ್ ರಾಜನ್, ನೋಟು ನಿಷೇಧದ ಪ್ರಸ್ತಾವನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಆರ್ ಬಿಐ ನೊಂದಿಗೆ ಸಮಾಲೋಚನೆ ನಡೆಸಿರಲ್ಲ ಎಂದಿದ್ದು, ಶೇ.87.5 ರಷ್ಟು ಚಲಾವಣೆಯಲ್ಲಿದ್ದ ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸುವುದು ಸೂಕ್ತ ಆಯ್ಕೆಯಾಗಿರಲಿಲ್ಲ ಎಂಬುದನ್ನು ರಘುರಾಮ್ ರಾಜನ್ ಮತ್ತೊಮ್ಮೆ ಹೇಳಿದ್ದಾರೆ.